alex Certify ಗುಜರಾತ್ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರಿಗೆ ಸ್ಪಷ್ಟ ಸಂದೇಶ; ಸ್ವಯಂ ನಿವೃತ್ತಿಗೆ ಹೈಕಮಾಂಡ್ ಸೂಚನೆ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಜರಾತ್ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರಿಗೆ ಸ್ಪಷ್ಟ ಸಂದೇಶ; ಸ್ವಯಂ ನಿವೃತ್ತಿಗೆ ಹೈಕಮಾಂಡ್ ಸೂಚನೆ….?

 

ಎರಡು ಹಂತಗಳಲ್ಲಿ ನಡೆದ ಗುಜರಾತ್ ವಿಧಾನಸಭಾ ಚುನಾವಣೆಗೆ ಮತದಾನ ಪೂರ್ಣಗೊಂಡಿದ್ದು, ಡಿಸೆಂಬರ್ 8ರ ನಾಳೆ ಫಲಿತಾಂಶ ಹೊರಬೀಳಲಿದೆ. ಇದರ ಮಧ್ಯೆ 73 ವರ್ಷ ಮೇಲ್ಪಟ್ಟ ರಾಜ್ಯದ ಹಿರಿಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಸ್ವಯಂ ನಿವೃತ್ತಿ ಪಡೆಯುವಂತೆ ಸ್ಪಷ್ಟ ಸಂದೇಶ ರವಾನಿಸಿದೆ ಎನ್ನಲಾಗಿದೆ.

ಈಗಾಗಲೇ ಬಿಜೆಪಿ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದು, ಇದೇ ಮಾರ್ಗವನ್ನು ಅನುಸರಿಸುವಂತೆ ಇತರೆ ಹಿರಿಯ ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮೂಲಕ ಸಂದೇಶ ಕಳುಹಿಸಲಾಗಿದೆ ಎಂದು ಹೇಳಲಾಗಿದೆ.

ಅಲ್ಲದೆ ಹಿರಿಯ ನಾಯಕರ ಚುನಾವಣಾ ನಿವೃತ್ತಿ ನಿರ್ಧಾರ ಸ್ವಯಂ ಪ್ರೇರಿತವಾಗಿ ಬರಬೇಕು. ಹೈಕಮಾಂಡ್ ಸೂಚನೆಯ ಮೇರೆಗೆ ಈ ತೀರ್ಮಾನ ಕೈಗೊಂಡಿದ್ದೇವೆ ಎಂಬ ಅಭಿಪ್ರಾಯ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕ ವಲಯದಲ್ಲಿ ಬರದಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ ಎಂದು ಮೂಲಗಳು ಹೇಳಿವೆ. ನಾಳೆ ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದ ಬಳಿಕ ಈ ಕುರಿತು ಹೈಕಮಾಂಡ್ ಸ್ಪಷ್ಟ ನಿಲುವಿಗೆ ಬರಲಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...