alex Certify ಗುಜರಿ ಅಂಗಡಿಗೆ ಬೆಂಕಿ; ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಜರಿ ಅಂಗಡಿಗೆ ಬೆಂಕಿ; ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿ

ಮಂಡ್ಯ: ನಗರದಲ್ಲಿನ ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿವೆ.

ಈ ಘಟನೆ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಇಲ್ಲಿಯ ಕ್ರೀಡಾಂಗಣದ ಹತ್ತಿರ ಇರುವ ಗುಜರಿ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿದ್ದು, ಇದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಬೆಂಕಿ ಜೋರಾಗಿ ಹೊತ್ತಿಕೊಂಡಿದ್ದರ ಪರಿಣಾಮ ಅಂಗಡಿಯಲ್ಲಿದ್ದ ಬಹುತೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಪರೀಕ್ಷಾ ವರದಿ ಬಳಿಕ ನೆಮ್ಮದಿಯ ನಿಟ್ಟುಸಿರುಬಿಟ್ಟ ನಟಿ ಕರೀನಾ ಕಪೂರ್….!

ಸುದ್ದಿ ತಿಳಿಯುತ್ತಿದ್ದಂತೆ ಕೂಡಲೇ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯ ಆಚೆಗೂ ಬೆಂಕಿ ಆವರಿಸಿತ್ತು. ಸದ್ಯ ಹೊಗೆ ದಟ್ಟವಾಗಿ ಹಬ್ಬಿದೆ.

ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಸ್ಥಳೀಯರು ಕೈ ಜೋಡಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...