alex Certify ಗುಡಿಸಲಿಗೆ ಕಾರು ಡಿಕ್ಕಿ; ಓರ್ವ ಮಹಿಳೆ ಸಾವು, ಐವರ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡಿಸಲಿಗೆ ಕಾರು ಡಿಕ್ಕಿ; ಓರ್ವ ಮಹಿಳೆ ಸಾವು, ಐವರ ಸ್ಥಿತಿ ಗಂಭೀರ

ಹೈದರಾಬಾದ್ : ಕರೀಂನಗರದ ಕಮಾನ್ ಪ್ರದೇಶದಲ್ಲಿನ ರಸ್ತೆ ಹತ್ತಿರ ನಿರ್ಮಿಸಿದ್ದ ಗುಡಿಸಲಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅದರೊಳಗಿದ್ದ ಓರ್ವ ಮಹಿಳೆ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಗುಡಿಸಲಿಗೆ ಡಿಕ್ಕಿ ಹೊಡೆದಿದೆ. ಈ ಗುಡಿಸಲಿನಲ್ಲಿ 6 ಜನ ಮಹಿಳೆಯರು ಕೆಲಸ ಮಾಡುತ್ತಿದ್ದರು. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಗುಡಿಸಲಿಗೆ ನುಗ್ಗುತ್ತಿದ್ದಂತೆ ಕಾರು ಚಾಲಕ ವಾಹನವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ರಾಜೇಂದ್ರ ಪ್ರಸಾದ್ ಎಂಬ ವ್ಯಕ್ತಿಯ ಹೆಸರಿನಲ್ಲಿದ್ದ ಕಾರು ಅಪಘಾತವಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಮಹಿಳೆ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...