alex Certify ಗುಡಿಸಲಿನ ಮೇಲೆ ಬಿದ್ದ ಟ್ರಕ್; ಮಲಗಿದ್ದ ಮೂವರು ಮಕ್ಕಳು ಸ್ಥಳದಲ್ಲಿಯೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡಿಸಲಿನ ಮೇಲೆ ಬಿದ್ದ ಟ್ರಕ್; ಮಲಗಿದ್ದ ಮೂವರು ಮಕ್ಕಳು ಸ್ಥಳದಲ್ಲಿಯೇ ಸಾವು

ಕಲ್ಲಿದ್ದಲು ತುಂಬಿಕೊಂಡಿದ್ದ ಟ್ರಕ್ ಗುಡಿಸಲಿನ ಮೇಲೆ ಪಲ್ಟಿಯಾದ ಪರಿಣಾಮ ಅದರಲ್ಲಿ ಮಲಗಿದ್ದ ಮೂವರು ಬಾಲಕಿಯರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ಹತ್ತಿರದ ತಹಸಿಲ್ ನಲ್ಲಿ ನಡೆದಿದೆ.

ಸಾವನ್ನಪ್ಪಿದ ಮೂವರೂ ಹೆಣ್ಣು ಮಕ್ಕಳಾಗಿದ್ದು, ಮೂರರಿಂದ 7 ವರ್ಷದೊಳಗಿನವರು ಎನ್ನಲಾಗಿದೆ. ಅಲ್ಲದೇ, ಘಟನೆಯಲ್ಲಿ ಅದೃಷ್ಟವಶಾತ್ ಎರಡು ವರ್ಷದ ಬಾಲಕಿ ಬದುಕುಳಿದಿದ್ದಾಳೆ.

ಸಾವನ್ನಪ್ಪಿದ ಬಾಲಕಿಯರ ಪಾಲಕರು, ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಗುಡಿಸಲು ನಿರ್ಮಾಣ ಮಾಡಿಕೊಂಡಿದ್ದರು. ತಾವು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಮಕ್ಕಳನ್ನು ಇಲ್ಲಿಯೇ ಬಿಟ್ಟು ಹೋಗುತ್ತಿದ್ದರು. 2 ವರ್ಷದ ಮಗುವಿಗೆ ಮರಕ್ಕೆ ತೊಟ್ಟಿಲು ಕಟ್ಟಿದ್ದರು. ಹೀಗೆ ತಂದೆ – ತಾಯಿ ಇಲ್ಲದ ಸಂದರ್ಭದಲ್ಲಿ ಚಿಕ್ಕ ಮಕ್ಕಳು ಗುಡಿಸಲಿನಲ್ಲಿ ಮಲಗಿದ್ದಾಗ ಈ ಅಚಾತುರ್ಯ ನಡೆದಿದೆ. ಗುಡಿಸಲಿನಿಂದ ದೂರ ಇದ್ದ ಕಾರಣ ಎರಡು ವರ್ಷದ ಮಗು ಬದುಕುಳಿದಿದೆ.

ಕಲ್ಲಿದ್ದಲನ್ನು ಇಳಿಸುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗುಡಿಸಲ ಮೇಲೆಯೇ ಬಿದ್ದಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಟ್ಟಿಗೆ ಫ್ಯಾಕ್ಟರಿಯ ಮಾಲೀಕ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಮಾಲೀಕ ಗೋಪಿನಾಥ್ ಮದ್ವಿ, ಕಲ್ಲಿದ್ದಲು ತಂದಿದ್ದ ಸುರೇಶ್ ರಾಮದಾಸ್ ಪಾಟೀಲ್ ಮತ್ತು ಟ್ರಕ್ ಚಾಲಕ ತೌಫಿಕ್ ಶೇಖ್ ಬಂಧಿತರು ಎಂದು ಗುರುತಿಸಲಾಗಿದ್ದು, ಬಂಧಿತರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...