alex Certify ಗುಮ್ಮಕಲ್ಲು ಗುಡ್ಡ ಕುಸಿತ ಪ್ರಕರಣ; ಮೂವರ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಮ್ಮಕಲ್ಲು ಗುಡ್ಡ ಕುಸಿತ ಪ್ರಕರಣ; ಮೂವರ ವಿರುದ್ಧ FIR ದಾಖಲು

ಚಾಮರಾಜನಗರ: ಚಾಮರಾಜನಗರದ ಗುಮ್ಮಕಲ್ಲು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಮೂವರ ವಿರುದ್ಧ ಎಫ್ಐಆರ್ ದಾಖಲಿಸಿದೆ.

ಗುಮ್ಮಕಲ್ಲು ಪ್ರದೇಶದಲ್ಲಿ ಗಣಿಗಾರಿಕೆ ನಡೆಸುತ್ತಿದ್ದ ವೇಳೆ ನಿನ್ನೆ ಟಿಪ್ಪರ್ ಮೇಲೆ ಬಂಡೆ ಕುಸಿದು ಬಿದ್ದಿತ್ತು. ಪ್ರಕರಣ ಸಂಬಂಧ ಗಣಿ ಗುತ್ತಿಗೆ ಪಡೆದಿದ್ದ ಮಹೇಂದ್ರಪ್ಪ, ಉಪಗುತ್ತಿಗೆ ಪಡೆದಿದ್ದ ಹಕೀಂ ಹಾಗೂ ಗಣಿ ನೋಡಿಕೊಳ್ಳುತ್ತಿದ್ದ ನವೀದ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ನವೀದ್ ಎಂಬಾತನನ್ನು ಈಗಾಗಲೇ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದರೆ. ಇನ್ನಿಬ್ಬರ ಬಂಧನಕ್ಕಾಗಿ ಬಲೆ ಬೀಸಲಾಗಿದೆ.

ಕ್ವಾರಿಯಲ್ಲಿ ಬಂಡೆ ಕುಸಿದುಬಿದ್ದ ಪರಿಣಾಮ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಮೂವರು ಕಾರ್ಮಿಕರು ನಾಪತ್ತೆಯಾಗಿದ್ದು, ಬಂಡೆಯಡಿಯಲ್ಲಿ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...