alex Certify ಗುಮ್ಮಕಲ್ಲು ಬಂಡೆ ಕುಸಿತ ಪ್ರಕರಣ; ಮತ್ತೋರ್ವ ಕಾರ್ಮಿಕನ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಮ್ಮಕಲ್ಲು ಬಂಡೆ ಕುಸಿತ ಪ್ರಕರಣ; ಮತ್ತೋರ್ವ ಕಾರ್ಮಿಕನ ಶವ ಪತ್ತೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಮ್ಮಕಲ್ಲು ಬಂಡೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಬಂಡೆಯಡಿ ಸಿಲುಕಿದ್ದ ಮೃತದೇಹ ಹೊರತೆಗೆಯಲಾಗಿದೆ.

ಮಾರ್ಚ್ 4ರಂದು ಗುಮ್ಮಕಲ್ಲು ಕ್ವಾರಿಯಲ್ಲಿ ಗಣಿಗಾರಿಕೆ ವೇಳೆ ಟಿಪ್ಪರ್ ಮೇಲೆ ಬಂಡೆ ಕುಸಿದು ಬಿದ್ದಿತ್ತು. ಘಟನೆಯಲ್ಲಿ 6 ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ನಿನ್ನೆ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆಯಾಗಿತ್ತು. ಇದೀಗ ಬಂಡೆಯಡಿ ಸಿಲುಕಿದ್ದ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದೆ.

ಈ ನಡುವೆ ಇಂದಿನಿಂದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕ್ವಾರಿಯಲ್ಲಿ ಪರಿಶೀಲನೆ ನಡೆಸಿದ್ದು, ಅಕ್ರಮ ಕಲ್ಲು ಗಣಿಗಾರಿಕೆ ಕಂಡುಬಂದಲ್ಲಿ ಸ್ಥಳದಲ್ಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಲುವಂತೆ ರಾಜ್ಯ ಸರ್ಕಾರ ಸೂಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...