alex Certify ಗೋ ಕಳ್ಳರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ ಈಗ ಪಾಕಿಸ್ತಾನ ಪ್ರೇಮಿ ಪರ ನಿಂತಿದ್ದಾರೆ; ಬಿಜೆಪಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೋ ಕಳ್ಳರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ ಈಗ ಪಾಕಿಸ್ತಾನ ಪ್ರೇಮಿ ಪರ ನಿಂತಿದ್ದಾರೆ; ಬಿಜೆಪಿ ವಾಗ್ದಾಳಿ

ಬೆಂಗಳೂರು: ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ಪೊಲೀಸರ ಹಲ್ಲೆ ಕ್ರಮವನ್ನು ಖಂಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಬಿಜೆಪಿ, ಸಿದ್ದರಾಮಯ್ಯ ಅವರ ಪಾಕಿಸ್ತಾನ ಪ್ರೇಮ ಈ ಹಿಂದೆಯೇ ಪ್ರಕಟವಾಗಿತ್ತು. ಪಾಕಿಸ್ತಾನವನ್ನು ಪ್ರೇಮಿಸುವ ಸಮಾಜಘಾತುಕ ಸಂಘಟನೆಗಳ ಕೇಸ್‌ ಹಿಂಪಡೆದಿದ್ದರು. ಈಗ ಶತ್ರುರಾಷ್ಟ್ರ ಪಾಕಿಸ್ತಾನದ ಪರವಾಗಿ ಬರೆದ ವ್ಯಕ್ತಿಯ ಪರ ಸಿದ್ದರಾಮಯ್ಯ ಆದಿಯಾಗಿ ಕಾಂಗ್ರೆಸ್ ನ ಎಲ್ಲಾ ನಾಯಕರು ತೋರ್ಪಡಿಸುತ್ತಿರುವ ಕಾಳಜಿ ದೇಶದ ಹಿತಾಸಕ್ತಿಗೆ ಮಾರಕವಾಗಿದೆ ಎಂದು ವಾಗ್ದಾಳಿ ನಡೆಸಿದೆ.

ಈ ಹಿಂದೆ ಗೋ ಕಳ್ಳರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ ಈಗ ಪಾಕಿಸ್ತಾನ ಪ್ರೇಮಿಯ ಪರ ನಿಂತಿದ್ದಾರೆ. ಕಾಂಗ್ರೆಸ್‌ ನಾಯಕರ ಒಲವು, ನಿಲುವುಗಳೆಲ್ಲ ದೇಶದ ವಿರುದ್ಧವಾಗಿರುವವರ ಪರವಾಗಿರುತ್ತದೆ. ಸೈನಿಕರ ಸಾವು ಬಯಸುವ ವ್ಯಕ್ತಿಯನ್ನು ಅಮಾಯಕ ಎಂದು ಬಿಂಬಿಸುವ ಏಕೈಕ ಪಕ್ಷವೊಂದಿದ್ದರೆ, ಅದು ಕಾಂಗ್ರೆಸ್‌ ಮಾತ್ರ ಎಂದು ಸರಣಿ ಟ್ವೀಟ್ ಮೂಲಕ ಕೆಂಡಕಾರಿದೆ.

ಡೆಲ್ಟಾ, ಆಲ್ಫಾ ಬಳಿಕ ಜನತೆಗೆ ‘ಕಪ್ಪಾ’ ಶಾಕ್..!

ದೇಶದ್ರೋಹ ಎಂದರೇನು ಎಂದು ಶ್ರೀ ಸಿದ್ದರಾಮಯ್ಯರಿಂದ ಪ್ರತ್ಯೇಕವಾಗಿ ಕೇಳಬೇಕಿಲ್ಲ. ಅವರು ಸಿಎಂ ಆಗಿದ್ದಾಗ ದೇಶದ್ರೋಹದ ಹೇಳಿಕೆ ಕೊಡುವಂತವರನ್ನು ಜೊತೆಯಲ್ಲಿಟ್ಟುಕೊಂಡೆ ಕೆಲಸ ಮಾಡಿದವರು. ಅದು ನಿಮ್ಮ ಕಾಲ. ಸೈನಿಕರು, ಸೈನ್ಯದ ಬಗ್ಗೆ ದೇಶದ್ರೋಹದ ಹೇಳಿಕೆ ನೀಡಿದ್ದ ವ್ಯಕ್ತಿಯನ್ನು ಈಗ ಕಾರ್ಕಳದಲ್ಲಿ ಪೊಲೀಸ್ ಬಂಧಿಸಿದೆ. ಇದು ನಮ್ಮ ಕಾಲ ಎಂದು ತಿರುಗೇಟು ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...