alex Certify ಚಲಿಸುತ್ತಿದ್ದ ಬಸ್ ನಲ್ಲಿ ಹೃದಯಾಘಾತ; ಸಮಯಪ್ರಜ್ಞೆ ಮೆರೆದು ಪ್ರಯಾಣಿಕರ ಜೀವ ಕಾಪಾಡಿದ ಚಾಲಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ಬಸ್ ನಲ್ಲಿ ಹೃದಯಾಘಾತ; ಸಮಯಪ್ರಜ್ಞೆ ಮೆರೆದು ಪ್ರಯಾಣಿಕರ ಜೀವ ಕಾಪಾಡಿದ ಚಾಲಕ

ಚಲಿಸುತ್ತಿದ್ದ ಬಸ್ ನಲ್ಲಿ ಹೃದಯಾಘಾತವಾದರೂ ಸಹ ಸಮಯಪ್ರಜ್ಞೆ ಮೆರೆದ ಚಾಲಕ ಪ್ರಯಾಣಿಕರ ಜೀವ ಉಳಿಸಿದ್ದು, ಆದರೆ ದುರದೃಷ್ಟವಶಾತ್ ಬಳಿಕ ಚಾಲಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇಂತಹದೊಂದು ಘಟನೆ ಗೋಕಾಕ್ ಫಾಲ್ಸ್ ಮಾರ್ಗದ ಇಳಿಜಾರಿನಲ್ಲಿ ಮಂಗಳವಾರದಂದು ನಡೆದಿದ್ದು, ಚಾಲಕ ಮಂಜು ವೀರಪ್ಪ ಅಂಕಲಗಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಸಾವರಿಸಿಕೊಂಡ ಅವರು ತಕ್ಷಣವೇ ಬಸ್ಸನ್ನು ನಿಲ್ಲಿಸಿದ್ದರು.

ಬಳಿಕ ಕಂಡಕ್ಟರ್ ಸೇರಿದಂತೆ ಬಸ್ಸಿನಲ್ಲಿದ್ದ ಇತರೆ ಪ್ರಯಾಣಿಕರು ಮತ್ತೊಂದು ವಾಹನದ ಮೂಲಕ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಆದರೆ ಅಷ್ಟರಲ್ಲಾಗಲೇ ಮೃತಪಟ್ಟಿದ್ದರು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...