alex Certify ಚಳಿಗಾಲದಲ್ಲಿ ಕಾಡುವ ಕಾಯಿಲೆಗಳನ್ನು ಹೊಡೆದೋಡಿಸುತ್ತೆ ಮೊಳಕೆ ಬರಿಸಿದ ಹೆಸರು ಕಾಳು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಳಿಗಾಲದಲ್ಲಿ ಕಾಡುವ ಕಾಯಿಲೆಗಳನ್ನು ಹೊಡೆದೋಡಿಸುತ್ತೆ ಮೊಳಕೆ ಬರಿಸಿದ ಹೆಸರು ಕಾಳು..!

ಬೇಳೆ-ಕಾಳುಗಳು ನಮ್ಮ ದೈನಂದಿನ ಆಹಾರದ ಅವಿಭಾಜ್ಯ ಅಂಗಗಳಾಗಿವೆ. ಅವುಗಳಲ್ಲಿ ನಮ್ಮ ದೇಹಕ್ಕೆ ಅಗತ್ಯವಾದ ಅನೇಕ ಪೋಷಕಾಂಶಗಳಿವೆ. ಅದರಲ್ಲೂ ಹೆಸರು ಕಾಳಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ರೋಟೀನ್ ಕಂಡುಬರುತ್ತದೆ.

ಇದು ಸ್ನಾಯುಗಳ ಬೆಳವಣಿಗೆಗೆ ಬಹಳ ಸಹಾಯಕವಾಗಿದೆ. ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಮೊಳಕೆ ಬರಿಸಿದ ಹೆಸರು ಕಾಳನ್ನು ತಪ್ಪದೇ ಸೇವಿಸಿ. ಅದರಿಂದ ನೀವು ಅದ್ಭುತವಾದ ಪ್ರಯೋಜನಗಳನ್ನು ಪಡೆಯುತ್ತೀರಿ.

ನೆನೆಸಿದ ಹೆಸರುಕಾಳು ಚಳಿಗಾಲದಲ್ಲಿ ಕಾಡುವ ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ. ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮೊಳಕೆ ಕಟ್ಟಿದ ಹೆಸರುಕಾಳನ್ನು ಸಲಾಡ್‌ಗಳಲ್ಲಿ ಬೆರೆಸಿ ಬಳಸಬಹುದು. ಮೊಳಕೆಯೊಡೆದ ಹೆಸರುಕಾಳು ದೇಹದಲ್ಲಿರುವ ಹೆಚ್ಚುವರಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಕೆಲಸ ಮಾಡುತ್ತದೆ. ಪ್ರತಿದಿನ ಬೆಳಗ್ಗೆ ಮೊಳಕೆಯೊಡೆದ ಹೆಸರುಕಾಳು ಸೇವಿಸಿದರೆ  ದೇಹದಲ್ಲಿನ ಅಗತ್ಯ ಪ್ರೋಟೀನ್ ಕೊರತೆಯನ್ನು ಅದು ನಿವಾರಿಸುತ್ತದೆ ಮತ್ತು ಸ್ನಾಯುಗಳನ್ನು ಬಲಪಡಿಸುತ್ತದೆ.

ರಕ್ತದಲ್ಲಿ ಅಧಿಕ ಸಕ್ಕರೆಯ ಅಂಶ ಹೊಂದಿರುವವರಿಗೆ ಇದು ವರದಾನಕ್ಕಿಂತ ಕಡಿಮೆಯಿಲ್ಲ. ಮಧುಮೇಹಿಗಳಿಗೆ ಉಂಟಾಗುವ ಮಲಬದ್ಧತೆಯ ಸಮಸ್ಯೆ ಹೆಸರುಕಾಳು ಸೇವನೆಯಿಂದ ದೂರವಾಗುತ್ತದೆ. ಅಧಿಕ ರಕ್ತದೊತ್ತಡವನ್ನು ಸಹ ಇದು ಕಡಿಮೆ ಮಾಡುತ್ತದೆ. ನೀವು ಪ್ರತಿದಿನ ವರ್ಕೌಟ್ ಮಾಡುತ್ತಿದ್ದರೆ ತಪ್ಪದೇ ಮೊಳಕೆ ಬರಿಸಿದ ಹೆಸರುಕಾಳನ್ನು ಸೇವಿಸಿ. ಇದರಿಂದ ದಿನವಿಡೀ ನಿಮ್ಮ ದೇಹದಲ್ಲಿ ಶಕ್ತಿ, ಚೈತನ್ಯ ತುಂಬಿರುತ್ತದೆ. ಸ್ನಾಯು ಚೇತರಿಕೆ ವೇಗವಾಗಿರುತ್ತದೆ. ಇದು ದೇಹದಲ್ಲಿನ ಕಬ್ಬಿಣದ ಕೊರತೆಯನ್ನು ನಿವಾರಿಸುತ್ತದೆ. ಮೊಳಕೆ ಬರಿಸಿದ ಹೆಸರು ಕಾಳು ತಿನ್ನುವುದರಿಂದ ರಕ್ತಹೀನತೆ ಉಂಟಾಗುವುದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...