alex Certify ಚಳಿಗಾಲದಲ್ಲಿ ಕಾಡುವ ಶೀತ ಮತ್ತು ಜ್ವರಕ್ಕೆ ರಾಮಬಾಣ ಈರುಳ್ಳಿ ರಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಳಿಗಾಲದಲ್ಲಿ ಕಾಡುವ ಶೀತ ಮತ್ತು ಜ್ವರಕ್ಕೆ ರಾಮಬಾಣ ಈರುಳ್ಳಿ ರಸ

ಚಳಿಗಾಲ ಬಂದ ತಕ್ಷಣ ನಮ್ಮಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವುದರಿಂದ ಸಹಜವಾಗಿಯೇ ಸಾಂಕ್ರಾಮಿಕ ರೋಗಗಳ ಅಪಾಯ ಹೆಚ್ಚಾಗುತ್ತದೆ. ಇದರಿಂದಾಗಿ ಅನೇಕರು ಅನಾರೋಗ್ಯಕ್ಕೆ ತುತ್ತಾಗುತ್ತಾರೆ.

ಶೀತ, ಜ್ವರ ಇಂತಹ ಅನೇಕ ಸಮಸ್ಯೆಗಳು ಕಾಡಲಾರಂಭಿಸುತ್ತವೆ. ಇವುಗಳಿಂದ ಮುಕ್ತಿ ಪಡೆಯಲು ವಿವಿಧ ರೀತಿಯ ಔಷಧಿಗಳನ್ನು ಸೇವಿಸುವ ಬದಲು ಮನೆಯಲ್ಲೇ ಇರುವ ಪದಾರ್ಥಗಳಲ್ಲಿ ಮದ್ದನ್ನು ಹುಡುಕಬಹುದು. ಶೀತ ಮತ್ತು ಜ್ವರ ಮಾತ್ರವಲ್ಲ ಕೆಮ್ಮಿನಿಂದಲೂ ಪರಿಹಾರ ನೀಡುತ್ತದೆ ಈರುಳ್ಳಿ ಜ್ಯೂಸ್‌.

ಈರುಳ್ಳಿ ಸಿರಪ್ ಅಥವಾ ಈರುಳ್ಳಿ ಜ್ಯೂಸ್‌ ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ಶೀತ ಮತ್ತು ಜ್ವರದಿಂದ ಪರಿಹಾರವನ್ನು ನೀಡುತ್ತದೆ. ಈರುಳ್ಳಿ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ಕುಡಿಯುವುದರಿಂದ ಗಂಟಲು ನೋವು ನಿವಾರಣೆಯಾಗುತ್ತದೆ. ಇದು ನಿಮ್ಮ ಚಯಾಪಚಯವನ್ನು ಸುಧಾರಿಸುತ್ತದೆ. ಇದರಲ್ಲಿರುವ ಸಲ್ಫರ್ ದೇಹವನ್ನು ಸೋಂಕಿನಿಂದ ರಕ್ಷಿಸುತ್ತದೆ.

ಈರುಳ್ಳಿಯ ಸೇವನೆಯು ದೇಹದಲ್ಲಿ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ. ಟೈಪ್ 1 ಮತ್ತು ಟೈಪ್ 2 ಶುಗರ್ ರೋಗಿಗಳಿಗೆ ಈರುಳ್ಳಿ ಸೇವನೆ ಒಳ್ಳೆಯದು. ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸಲು ಈರುಳ್ಳಿ ಸಹಾಯ ಮಾಡುತ್ತದೆ.  ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತದ ವಿರುದ್ಧ ಹೋರಾಡುವ ಗುಣಲಕ್ಷಣಗಳು ಈರುಳ್ಳಿಯಲ್ಲಿ ಕಂಡುಬರುತ್ತವೆ. ಈರುಳ್ಳಿ ರಸವು ದೇಹದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಈರುಳ್ಳಿಯನ್ನು ನೀವು ಸಲಾಡ್ ರೂಪದಲ್ಲಿ ಸಹ ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಹೊಟ್ಟೆಯ ಸಮಸ್ಯೆಗಳು, ಅಜೀರ್ಣ ಮತ್ತು ಮಲಬದ್ಧತೆಯಿಂದ ಪರಿಹಾರವನ್ನು ನೀಡುತ್ತದೆ. ಈರುಳ್ಳಿ ಕೂದಲು ಉದುರುವಿಕೆಯನ್ನೂ ಕಡಿಮೆ ಮಾಡುತ್ತದೆ. ಚಳಿಗಾಲದಲ್ಲಿ ಕೂದಲು ಉದುರುವುದು ಮತ್ತು ತಲೆಹೊಟ್ಟು ಸಮಸ್ಯೆ ಹೆಚ್ಚಾಗಿರುತ್ತದೆ. ಈರುಳ್ಳಿ ರಸವನ್ನು ಬಳಸುವುದರಿಂದ ಕೂದಲು ಉದುರುವಿಕೆ ನಿಲ್ಲುತ್ತದೆ. ತಲೆಹೊಟ್ಟು ಕೂಡ ಕಡಿಮೆಯಾಗುತ್ತದೆ. ಕೂದಲಿನ ಬುಡದಲ್ಲಿ ಯಾವುದೇ ರೀತಿಯ ಸೋಂಕು ಇದ್ದರೆ ಈರುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಅದನ್ನು ನಿವಾರಿಸುತ್ತವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...