alex Certify ಚಿತ್ರದುರ್ಗದಲ್ಲಿ 45 ಕುಟುಂಬಸ್ಥರ ಮತಾಂತರ; ಶಾಸಕ ಗೂಳಿಹಟ್ಟಿ ಶೇಖರ್ ಗಂಭೀರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರದುರ್ಗದಲ್ಲಿ 45 ಕುಟುಂಬಸ್ಥರ ಮತಾಂತರ; ಶಾಸಕ ಗೂಳಿಹಟ್ಟಿ ಶೇಖರ್ ಗಂಭೀರ ಆರೋಪ

ಬೆಂಗಳೂರು: ಮತಾಂತರಕ್ಕೆ ಯತ್ನ ನಡೆಸುತ್ತಿರುವ ಆರೋಪಗಳು ರಾಜ್ಯದಲ್ಲಿ ಮತ್ತೆ ಭಾರಿ ಚರ್ಚೆಗೆ ಕಾರಣವಾಗಿದ್ದು, ಇದೀಗ ಶಾಸಕ ಗೂಳಿಹಟ್ಟಿ ಶೇಖರ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ನನ್ನ ಹೆತ್ತ ಅಮ್ಮನನ್ನೇ ಕ್ರಿಶ್ಚಿಯನ್ ಮಷಿನರಿಗಳು ಮತಾಂತರ ಮಾಡಿವೆ ಎಂದು ಆರೋಪಿಸಿದ್ದ ಗೂಳಿಹಟ್ಟಿ ಶೇಖರ್ ಇದೀಗ ಚಿತ್ರದುರ್ಗ ಜಿಲ್ಲೆ ಹೊಸನಗರದ ಬಲ್ಲಾಳಸಮುದ್ರ ಗ್ರಾಮದಲ್ಲಿ 40-45 ಕುಟುಂಬದವರನ್ನು ಮತಾಂತರ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದಾರೆ.

ಇಲ್ಲಿನ ಸುಡಗಾಡು ಸಿದ್ಧ ಸಮುದಾಯದ 45 ಕುಟುಂಬಸ್ಥರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲಾಗಿದೆ. ಊರಿನಲ್ಲಿ ಸಣ್ಣ ಚರ್ಚ್ ಕೂಡ ನಿರ್ಮಿಸಲಾಗಿದೆ. ಈ ಬಗ್ಗೆ ನನಗೆ ದೂರು ಬಂದಿದೆ ಎಂದು ಆರೋಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...