
ಇದರ ಮಧ್ಯೆ ಜೆಡಿಎಸ್ ನಡೆ ಕುರಿತು ಲೇವಡಿ ಮಾಡಿರುವ ಕಾಂಗ್ರೆಸ್ ಪಕ್ಷ, ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು, ಆದರೆ ಈಗ “ಜಾತ್ಯಾತೀತತೆ”ಯನ್ನು ವಿಸರ್ಜಿಸಲು ಹೊರಟಿದ್ದಾರೆ. ಜನತಾ ದಳ ಎಂಬ ಹೆಸರನ್ನು “ಕಮಲ ದಳ” ಎಂದು ಬದಲಿಸಿಕೊಂಡರೆ ಒಳಿತು ! ಎಂದು ವ್ಯಂಗ್ಯವಾಡಿದೆ.
ಅಲ್ಲದೆ ಬಿಜೆಪಿಗೂ ಟಾಂಗ್ ನೀಡಿದ್ದು, ಬಿಜೆಪಿ ಈವರೆಗೆ ಜೆಡಿಎಸ್ ಪಕ್ಷವನ್ನು ಫ್ಯಾಮಿಲಿ ಪಾರ್ಟಿ ಎಂದು ಟೀಕಿಸುತ್ತಿತ್ತು, ಈಗ ಅದೇ ಫ್ಯಾಮಿಲಿಗೆ ನಾಲ್ಕು ಸೀಟು ಬಿಟ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಅಲ್ಲವೇ ಎಂದು ಪ್ರಶ್ನಿಸಿದೆ.