alex Certify ಜನಪ್ರತಿನಿಧಿಗಳನ್ನು ಬಿಡದೇ ಕಾಡಿದ ಕೊರೊನಾ; ಶಾಸಕರ ಕುಟುಂಬಕ್ಕೂ ಹರಡಿದ ಕೋವಿಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಪ್ರತಿನಿಧಿಗಳನ್ನು ಬಿಡದೇ ಕಾಡಿದ ಕೊರೊನಾ; ಶಾಸಕರ ಕುಟುಂಬಕ್ಕೂ ಹರಡಿದ ಕೋವಿಡ್

ಬೆಂಗಳೂರು: ರಾಜ್ಯಾದ್ಯಂತ ಕೋವಿಡ್ ಅಟ್ಟಹಾಸ ಹೆಚ್ಚುತ್ತಿದ್ದು, ಜನಪ್ರತಿನಿಧಿಗಳನ್ನು ಬೆಂಬಿಡದೇ ಕಾಡುತ್ತಿದೆ. ಸಿಎಂ ಬಸವರಾಜ್ ಬೊಮ್ಮಾಯಿ, ಅವರ ಪುತ್ರ ಹಾಗೂ ಸೊಸೆ ಕೂಡ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಇದೀಗ ಹುನಗುಂದ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ಕುಟುಂಬ ಸದಸ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಮೂರು ದಿನಗಳ ಹಿಂದೆ ಇಳಕಲ್ ನಿಂದ ಬೆಂಗಳೂರಿಗೆ ಆಗಮಿಸಿದ್ದ ಶಾಸಕರ ಕುಟುಂಬಕ್ಕೆ ಜ್ವರ ಕಾಣಿಸಿಕೊಂಡಿದೆ. ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿದೆ. ನಿನ್ನೆಯಷ್ಟೇ ಶಾಸಕ ದೊಡ್ಡನಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಬೆಂಗಳೂರಿನ ನಿವಾಸದಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ.

ಇದೀಗ ಶಾಸಕರ ಇಬ್ಬರು ಪುತ್ರಿಯರಿಗೂ ಕೊರೊನಾ ಸೋಂಕು ಹರಡಿದ್ದು, ಇಡೀ ಕುಟುಂಬಕ್ಕೆ ಕೋವಿಡ್ ಆತಂಕ ಎದುರಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...