alex Certify ‘ಜನೋತ್ಸವ’ ಕಾರ್ಯಕ್ರಮ ‘ಜನಸ್ಪಂದನ’ ವಾಗಿದ್ದರ ಹಿಂದಿದೆಯಂತೆ ಈ ಕಾರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಜನೋತ್ಸವ’ ಕಾರ್ಯಕ್ರಮ ‘ಜನಸ್ಪಂದನ’ ವಾಗಿದ್ದರ ಹಿಂದಿದೆಯಂತೆ ಈ ಕಾರಣ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ‘ಜನೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲು ಸಿದ್ಧತೆ ನಡೆಸಲಾಗಿತ್ತಾದರೂ ಇದು ಎರಡನೇ ಬಾರಿಗೆ ಮುಂದೂಡಿಕೆಯಾಗಿದೆ.

ಈ ಮೊದಲು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಹಿನ್ನೆಲೆಯಲ್ಲಿ ‘ಜನೋತ್ಸವ’ ಕಾರ್ಯಕ್ರಮ ಮುಂದೂಡಿಕೆಯಾಗಿದ್ದರೆ, ಸೆಪ್ಟೆಂಬರ್ 8ರಂದು ನಡೆಯಬೇಕಾಗಿದ್ದ ಇದೇ ಕಾರ್ಯಕ್ರಮ ಸಚಿವ ಉಮೇಶ್ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮುಂದೂಡಿಕೆಯಾಗಿದೆ.

ಹೀಗೆ ಎರಡು ಬಾರಿ ‘ಜನೋತ್ಸವ’ ಕಾರ್ಯಕ್ರಮ ಮುಂದೂಡಿಕೆಯಾಗಿದ್ದರಿಂದ ‘ದೋಷ’ವಿರಬಹುದು ಎಂಬ ಕಾರಣಕ್ಕಾಗಿ ಇದೀಗ ‘ಜನಸ್ಪಂದನ’ ಎಂದು ಹೆಸರಿಡಲಾಗಿದೆ. ಸಚಿವ ಉಮೇಶ್ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದ್ದು, ಹೀಗಾಗಿ ಇದೀಗ ‘ಜನಸ್ಪಂದನ’ ಕಾರ್ಯಕ್ರಮವನ್ನು ಸೆಪ್ಟೆಂಬರ್ 11ಕ್ಕೆ ನಿಗದಿಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...