alex Certify ಜನ್ಮ ನೀಡಿದ ತಂದೆಯಿಂದಲೇ ಮಕ್ಕಳ ಹತ್ಯೆಗೆ ಯತ್ನ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನ್ಮ ನೀಡಿದ ತಂದೆಯಿಂದಲೇ ಮಕ್ಕಳ ಹತ್ಯೆಗೆ ಯತ್ನ….!

ವಿಜಯಪುರ: ಎರಡನೇ ಪತ್ನಿಯ ಮಾತು ಕೇಳಿ, ಹುಟ್ಟಿಗೆ ಕಾರಣನಾದ ತಂದೆಯೇ ಮಕ್ಕಳ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಘಟನೆಯಲ್ಲಿ ಓರ್ವ ಮಗು ಸಾವನ್ನಪ್ಪಿದ್ದು, ಇನ್ನೊಂದು ಮಗು ಆಸ್ಪತ್ರೆಯಲ್ಲಿ ಜೀವನ್ಮರಣದ ಮಧ್ಯೆ ಹೋರಾಡುತ್ತಿದೆ. ಈ ಘಟನೆ ತಾಲೂಕಿನ ಮಿಂಚನಾಳ ತಾಂಡಾದಲ್ಲಿ ನಡೆದಿದೆ. ವಿನೋದ್ ಚವ್ಹಾಣ್ ಎಂಬ ವ್ಯಕ್ತಿಯೇ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.‌

ಸುಮಿತ್ ಎಂಬ ಬಾಲಕ ಸಾವನ್ನಪ್ಪಿದ್ದು, ಸಂಪತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಿನೋದ್ ನ ಮೊದಲ ಪತ್ನಿ ಸಾವನ್ನಪ್ಪಿದ್ದರು. ಈ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದರು.

ಆ ನಂತರ ಈ ವ್ಯಕ್ತಿ ಎರಡನೇ ಮದುವೆಯಾಗಿದ್ದ. ಆದರೆ, ಎರಡನೇ ಪತ್ನಿಗೆ ಈ ಮಕ್ಕಳನ್ನು ಕಂಡರೆ ಆಗುತ್ತಿರಲಿಲ್ಲ. ಹೀಗಾಗಿ ಮಕ್ಕಳ ಕೊಲೆಗೆ ಪ್ರೋತ್ಸಾಹಿಸಿದ್ದಾಳೆ ಎನ್ನಲಾಗಿದೆ.

ಹೀಗಾಗಿಯೇ ತಾನೇ ಹೆತ್ತ ಮಕ್ಕಳನ್ನು ಕೊಲ್ಲಲು ಮುಂದಾಗಿದ್ದಾನೆ ಎಂದು ತಿಳಿದು ಬಂದಿದೆ. ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...