alex Certify ಜೈಲಿನಲ್ಲಿ ಕೋಮು ಸೌಹಾರ್ದತೆ ಮೆರೆದ ಹಿಂದೂ – ಮುಸ್ಲಿಂ ಖೈದಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೈಲಿನಲ್ಲಿ ಕೋಮು ಸೌಹಾರ್ದತೆ ಮೆರೆದ ಹಿಂದೂ – ಮುಸ್ಲಿಂ ಖೈದಿಗಳು

ದೇಶದಲ್ಲಿ ಹಿಂದೂ-ಮುಸ್ಲಿಂ ಸಮುದಾಯದ ಮಧ್ಯೆ ದ್ವೇಷದ ಭಾವನೆ ಬಿತ್ತಲಾಗುತ್ತಿರುವುದು ಈಗ ಎಲ್ಲೆಡೆ ಕಂಡು ಬರುತ್ತಿದೆ. ಈ ನಡುವೆ ಉತ್ತರ ಪ್ರದೇಶದ ಈ ಘಟನೆಯು ಮಾನವೀಯತೆಯ ಮೇಲಿನ ನಮ್ಮ ನಂಬಿಕೆಯನ್ನು ಪುನರ್ ಸ್ಥಾಪಿಸುತ್ತದೆ.

ಹೌದು, ಉತ್ತರ ಪ್ರದೇಶದ ಈ ಜೈಲಿನಲ್ಲಿ ಖೈದಿಗಳು ಕೋಮು ಸೌಹಾರ್ದತೆ ಮೆರೆದಿದ್ದಾರೆ. ಬಾರಾಬಂಕಿ ಜೈಲಿನಲ್ಲಿ ರಂಜಾನ್ ಸಂದರ್ಭದಲ್ಲಿ ಹಿಂದೂಗಳು ಮತ್ತು ಮುಸ್ಲಿಂ ಖೈದಿಗಳು ಒಟ್ಟಾಗಿ ಉಪವಾಸ ಮುರಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಜೈಲು ಆಡಳಿತ ಸಿಬ್ಬಂದಿಯೇ ಇಫ್ತಾರ್ ಕೂಟ ಆಯೋಜಿಸಿದ್ದರು.

ಈ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳಲಾಗಿದ್ದು, ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ವಿವಿಧ ಧರ್ಮಗಳ ನಡುವಿನ ಈ ಸಾಮರಸ್ಯವನ್ನು ಕಂಡು ನೆಟ್ಟಿಗರು ಕೊಂಡಾಡಿದ್ದಾರೆ. ಇದು ಏಕತೆಯ ಶಕ್ತಿ ಅಂತೆಲ್ಲಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಮಂಕಾದ ಕಾಲದಲ್ಲಿ ಹೊರಗಿಗಿಂತ ಜೈಲಿನಲ್ಲಿ ಹೆಚ್ಚು ಮಾನವೀಯತೆ ಉಳಿದಿದೆ ಎಂದು ತೋರುತ್ತದೆ ಅಂತೆಲ್ಲಾ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

— News24 (@news24tvchannel) April 19, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...