alex Certify ಟ್ಯಾಂಕರ್ ಗೆ ಕಾರು ಡಿಕ್ಕಿ ಇಬ್ಬರು ಯುವತಿಯರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ಯಾಂಕರ್ ಗೆ ಕಾರು ಡಿಕ್ಕಿ ಇಬ್ಬರು ಯುವತಿಯರ ಸಾವು

ಹಾಲಿನ ಟ್ಯಾಂಕರ್ ಗೆ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವತಿಯರು ಸಾವನ್ನಪ್ಪಿರುವ ದಾರುಣ ಘಟನೆ ಹುಣಸೂರು – ಮೈಸೂರು ಹೆದ್ದಾರಿಯ ರಂಗಯ್ಯನ ಕೊಪ್ಪಲು ಗೇಟ್ ಬಳಿ ನಡೆದಿದೆ.

25 ವರ್ಷದ ಜೀವಿತ ಹಾಗೂ 26 ವರ್ಷದ ಪ್ರತ್ಯೂಷ ಮೃತಪಟ್ಟವರಾಗಿದ್ದು, ಇವರುಗಳು ಬರುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಹಾಲಿನ ಟ್ಯಾಂಕರ್ ಗೆ ರಭಸವಾಗಿ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಜೀವಿತಾ ಮೃತಪಟ್ಟರೆ, ಪ್ರತ್ಯೂಷ ಮೈಸೂರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...