alex Certify ತಂದೆಗಾಗಿ ವರುಣ ಕ್ಷೇತ್ರ ಬಿಟ್ಟುಕೊಡಲು ಸಿದ್ಧ: ಪುನರುಚ್ಚರಿಸಿದ ಸಿದ್ದರಾಮಯ್ಯ ಪುತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಂದೆಗಾಗಿ ವರುಣ ಕ್ಷೇತ್ರ ಬಿಟ್ಟುಕೊಡಲು ಸಿದ್ಧ: ಪುನರುಚ್ಚರಿಸಿದ ಸಿದ್ದರಾಮಯ್ಯ ಪುತ್ರ

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಮಧ್ಯೆ ಈ ಬಾರಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದರ ಕುರಿತು ಹಲವು ದಿನಗಳಿಂದ ಚರ್ಚೆ ನಡೆಯುತ್ತಿದೆ. ಆಡಳಿತ ಪಕ್ಷ ಬಿಜೆಪಿ ನಾಯಕರಂತೂ ಸಿದ್ದರಾಮಯ್ಯನವರಿಗೆ ಸ್ವಂತ ಕ್ಷೇತ್ರವೇ ಇಲ್ಲ ಎಂದು ಪದೇ ಪದೇ ವ್ಯಂಗ್ಯವಾಡುತ್ತಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಸಿದ್ದರಾಮಯ್ಯನವರು ಈ ಬಾರಿ ಬೆಂಗಳೂರು ಸುತ್ತಮುತ್ತಲಿನ ಯಾವುದಾದರೂ ಒಂದು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಮಧ್ಯೆ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಮಹತ್ವದ ಹೇಳಿಕೆ ನೀಡಿದ್ದಾರೆ.

ತಮ್ಮ ತಂದೆಯವರು ಬಯಸಿದರೆ ಅವರಿಗಾಗಿ ತಾವು ಪ್ರಸ್ತುತ ಪ್ರತಿನಿಧಿಸುತ್ತಿರುವ ವರುಣ ಕ್ಷೇತ್ರವನ್ನು ಬಿಟ್ಟುಕೊಡುವುದಾಗಿ ಯತೀಂದ್ರ ಅವರು ತಿಳಿಸಿದ್ದು, ನಾನು ಆಗ ಬೇರೆ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ. ಬದಲಾಗಿ ಕಾರ್ಯಕರ್ತರ ಜೊತೆ ಸೇರಿ ತಂದೆ ಸಿದ್ದರಾಮಯ್ಯನವರ ಗೆಲುವಿಗೆ ಶ್ರಮಿಸುವುದಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...