alex Certify ತಂದೆಯ ತಿಥಿ ಕಾರ್ಯದಂದೇ ಮಗಳ ದಾರುಣ ಸಾವು….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಂದೆಯ ತಿಥಿ ಕಾರ್ಯದಂದೇ ಮಗಳ ದಾರುಣ ಸಾವು….!

ತಂದೆಯನ್ನು ಕಳೆದುಕೊಂಡ ದುಃಖದಲ್ಲಿ ಮಗಳು ಆತನ‌ ತಿಥಿ ಕಾರ್ಯದಂದೆ ಧಾರುಣ ಅಂತ್ಯ ಕಂಡಿದ್ದಾರೆ. ಈ ಮನಕಲುಕುವ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ನಡೆದಿದೆ. ತನ್ನ ತಂದೆಯ ತಿಥಿ ಕಾರ್ಯಕ್ಕೆಂದು ಅಡುಗೆ ಮಾಡುವಾಗ ಗ್ಯಾಸ್ ಸೋರಿಕೆಯಾಗಿ, ಬೆಂಕಿ ಅನಾಹುತ ಸಂಭವಿಸಿದೆ‌. ಬೆಂಕಿ ಕೆನ್ನಾಲಿಗೆಗೆ ಸಿಕ್ಕ ಪರಮೇಶ್ವರಿ(46) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ದುರ್ದೈವಿ ಪರಮೇಶ್ವರಿಯವರ ತಂದೆ ಕಾಶಿ, ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಇಂದು ತಂದೆಯ ತಿಥಿ ಕಾರ್ಯ ಇದ್ದಿದ್ದರಿಂದ ಪರಮೇಶ್ವರಿ‌ ಮನೆಯಲ್ಲೇ ಅಡುಗೆ ಮಾಡಲು ಸಿದ್ದತೆ ನಡೆಸ್ತಿದ್ರು. ಆದರೆ ವಿಧಿಯ ಲೆಕ್ಕಾಚಾರ ಬೇರೆಯೆ ಇತ್ತು, ಅಡುಗೆ ಮಾಡುವಾಗಲೆ ಹತ್ತಿಕೊಂಡ ಬೆಂಕಿ ಪರಮೇಶ್ವರಿಯವರನ್ನ ಬಲಿ ಪಡೆದುಕೊಂಡಿದೆ.‌

ಮನೆ ಚಿಕ್ಕದಿದ್ದ ಕಾರಣ ಕೋಣೆಯೊಂದರಲ್ಲಿ ಸ್ಟವ್ ಇಟ್ಟು ಅಡುಗೆ ಮಾಡಲು ಕುಟುಂಬಸ್ಥರು ತಯಾರಿ ನಡೆಸಿದ್ದರು. ತಿಥಿ ಕಾರ್ಯಕ್ಕೆ ನಾನ್ ವೆಜ್ ಅಡುಗೆ ಮಾಡಲು ಸಿದ್ಧತೆ ನಡೆಸಿದ್ರು. ಪರಮೇಶ್ವರಿಯವರೆ ಅಡುಗೆಯ ಕಾರ್ಯವನ್ನು ವಹಿಸಿಕೊಂಡಿದ್ದರು, ಅಡುಗೆ ಮಾಡುವಾಗ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿದೆ. ಬಹುಶಃ ಸಿಲಿಂಡರ್ ಅನ್ನು ಸರಿಯಾಗಿ ಅಳವಡಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ಯಾಸ್ ಉರಿಯುತ್ತಿದ್ದ ಕಾರಣ ಬರಬರುತ್ತಾ ಬೆಂಕಿ ತೀವ್ರತೆಯು ಹೆಚ್ಚಾಗಿ, ಗ್ಯಾಸ್ ಫ್ಲೇಮ್ ದೊಡ್ಡದಾಗಿ ಹೊತ್ತಿಕೊಂಡಿದೆ. ಈ ಪರಿಣಾಮ ಅಡುಗೆ ಮಾಡ್ತಿದ್ದ ಪರಮೇಶ್ವರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಆರು ಮಂದಿಗೆ ಗಾಯಗಳಾಗಿದ್ದು, ವಿಕ್ಟೋರಿಯಾ ಬರ್ನಿಂಗ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...