alex Certify ತನ್ನ ಪಕ್ಷದವರ ಬಣ್ಣ ಬಯಲಾಗುತ್ತೆಂದು ಕಾಂಗ್ರೆಸ್​ನಿಂದ ಸುಳ್ಳು ಆರೋಪ: ಸಿಎಂ ಬೊಮ್ಮಾಯಿ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತನ್ನ ಪಕ್ಷದವರ ಬಣ್ಣ ಬಯಲಾಗುತ್ತೆಂದು ಕಾಂಗ್ರೆಸ್​ನಿಂದ ಸುಳ್ಳು ಆರೋಪ: ಸಿಎಂ ಬೊಮ್ಮಾಯಿ ಟಾಂಗ್

ಪಿಎಸ್​ಐ ನೇಮಕಾತಿ ಅಕ್ರಮದಲ್ಲಿನ ತಮ್ಮ ಪಕ್ಷದವರ ಬಣ್ಣ ಬಯಲಾಗುತ್ತೆ ಎಂಬ ಭಯಕ್ಕೆ ಕಾಂಗ್ರೆಸ್​​ ಹಿಟ್​ & ರನ್​ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನ ಆರ್​.ಟಿ. ನಗರದ ತಮ್ಮ ಖಾಸಗಿ ನಿವಾಸದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕಾಂಗ್ರೆಸ್​ ನಾಯಕರು ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ಹೇಳಿದರು.

ಪ್ರತಿ ಪಕ್ಷ ಸ್ಥಾನದಲ್ಲಿ ಇರುವವರು ಸರ್ಕಾರದ ಮೇಲೆ ಆರೋಪಗಳನ್ನು ಮಾಡುವಾಗ ಸಾಕ್ಷ್ಯಗಳನ್ನು ತೋರಿಸಬೇಕು. ಆದರೆ ಕಾಂಗ್ರೆಸ್​ ಕೇವಲ ಹಿಟ್​ & ರನ್​ ಮಾಡುತ್ತಿದೆ. ಪಿಎಸ್​ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಕಾಂಗ್ರೆಸ್​ ಪಕ್ಷದವರೇ ಬಂಧನಕ್ಕೊಳಗಾಗಿದ್ದಾರೆ ಎಂದು ಹೇಳಿದರು.

ಈ ಪ್ರಕರಣದಲ್ಲಿ ಯಾವೆಲ್ಲ ದೂರುಗಳು ಬಂದಿವೆಯೋ ಅವೆಲ್ಲದರ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ನಿಷ್ಪಕ್ಷಪಾತವಾಗಿ ತನಿಖೆಯನ್ನು ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನೂ ಬಂಧಿಸುತ್ತೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...