alex Certify ತರಗತಿ ನಡೆಯುವಾಗಲೇ ಅವಘಡ; ಚಾವಣಿ ಕುಸಿದು ಮೂವರು ವಿದ್ಯಾರ್ಥಿನಿಯರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತರಗತಿ ನಡೆಯುವಾಗಲೇ ಅವಘಡ; ಚಾವಣಿ ಕುಸಿದು ಮೂವರು ವಿದ್ಯಾರ್ಥಿನಿಯರಿಗೆ ಗಾಯ

ರಾಜ್ಯದಾದ್ಯಂತ ಮಳೆ ತನ್ನ ಆರ್ಭಟ ಮುಂದುವರಿಸಿದ್ದು, ಅನೇಕ ಕಡೆ ಮನೆಗಳು ಕುಸಿದಿವೆ. ಹೊಲ – ಗದ್ದೆಗಳಿಗೆ ನೀರು ನುಗ್ಗಿರುವ ಪರಿಣಾಮ ಬೆಳೆಗಳಿಗೂ ಹಾನಿಯಾಗಿದೆ.

ಈ ಅನಾಹುತಗಳ ಮಧ್ಯೆ ಕಲಬುರಗಿ ಜಿಲ್ಲೆ ಅಳಂದ ತಾಲೂಕಿನ ಮಾದನ ಹಿಪ್ಪರಗಿಯಲ್ಲಿ ಅವಘಡ ಒಂದು ಸಂಭವಿಸಿದೆ.

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪಿಯು ತರಗತಿ ನಡೆಯುತ್ತಿದ್ದ ವೇಳೆ ಚಾವಣಿ ಕುಸಿದಿದ್ದು, ಇದರ ಪರಿಣಾಮ ಮೂವರು ವಿದ್ಯಾರ್ಥಿನಿಯರಿಗೆ ಗಾಯವಾಗಿದೆ.

ಈ ಪೈಕಿ ನಿಕಿತಾ ಬಾಬುರಾವ ನಿಂಗದಳ್ಳಿ ಎಂಬ ವಿದ್ಯಾರ್ಥಿನಿ ತಲೆಗೆ ತೀವ್ರ ಏಟು ಬಿದ್ದಿರುವ ಕಾರಣ ಆಸ್ಪತ್ರೆಯಲ್ಲಿ ಹೊಲಿಗೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...