alex Certify ತಳ್ಳುಗಾಡಿಯಲ್ಲಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದ ಪತಿ: ತನಿಖೆಗೆ ಡಿಸಿಎಂ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಳ್ಳುಗಾಡಿಯಲ್ಲಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದ ಪತಿ: ತನಿಖೆಗೆ ಡಿಸಿಎಂ ಆದೇಶ

ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ತಳ್ಳುಗಾಡಿಯ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಬಂದ ವಿಡಿಯೋ ವೈರಲ್​ ಆದ ಬಳಿಕ ಉಪಮುಖ್ಯಮಂತ್ರಿ ಬ್ರಜೇಶ್​ ಪಾಠಕ್​​ ಈ ಘಟನೆ ಸಂಬಂಧ ತನಿಖೆಗೆ ಆದೇಶ ನೀಡಿದ್ದಾರೆ. ಬಲ್ಲಿಯಾ ಜಿಲ್ಲೆಯ ಅಂದೌರ್​ ಗ್ರಾಮದಲ್ಲಿ ಈ ಘಟನೆ ಸಂಭವಿಸಿತ್ತು.

ವಿಡಿಯೋದಲ್ಲಿ ಚಿಲ್ಖರ್​ ಬ್ಲಾಕ್​ ಗ್ರಾಮದ ನಿವಾಸಿ ಸಕುಲ್​ ಪ್ರಜಾಪತಿ ಅನಾರೋಗ್ಯದಿಂದ ಬಳಲುತ್ತಿದ್ದ ತಮ್ಮ ಪತ್ನಿ ಜೋಗ್ನಿಯನ್ನು ತಳ್ಳು ಗಾಡಿಯನ್ನು ಆಸ್ಪತ್ರೆಯಲ್ಲಿ ಕರೆದುಕೊಂಡು ಹೋಗಿದ್ದರು. ಈ ಘಟನೆ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಇದೀಗ ವೈದ್ಯಕೀಯ ಹಾಗೂ ಆರೋಗ್ಯ ಮಹಾನಿರ್ದೇಶಕರಿಗೆ ಡಿಸಿಎಂ ಆದೇಶ ನೀಡಿದ್ದಾರೆ ಎಂದು ಮುಖ್ಯ ವೈದ್ಯಾಧಿಕಾರಿ ನೀರಜ್​ ಪಾಂಡೆ ತಿಳಿಸಿದ್ರು.

ಮಾರ್ಚ್ 28 ರಂದು, ಪ್ರಜಾಪತಿ ತನ್ನ ಹೆಂಡತಿಯನ್ನು ತನ್ನ ಮನೆಯಿಂದ ಮೂರು ಕಿಲೋಮೀಟರ್ ದೂರದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ವೈದ್ಯರು ಕೆಲವು ಔಷಧಿಗಳನ್ನು ನೋಡಿ ಜೋಗ್ನಿಯನ್ನು ಜಿಲ್ಲಾಸ್ಪತ್ರೆಗೆ ಶಿಫ್ಟ್​ ಮಾಡುವಂತೆ ಸೂಚನೆ ನೀಡಿದ್ದರು. ಆದರೆ ಆ್ಯಂಬುಲೆನ್ಸ್​ ಸೇವೆ ಸಿಗದ ಕಾರಣ ಪತ್ನಿಯನ್ನು ಗಾಡಿಯಲ್ಲಿಯೇ ಬಿಟ್ಟು ಮನೆಗೆ ಹೋಗಿ ಹಣ ಹಾಗೂ ಬಟ್ಟೆಯನ್ನು ತಂದು ಬಳಿಕ ಆಕೆಯನ್ನು ಮಿನಿ ಟ್ರಕ್​ನಲ್ಲಿ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪತ್ನಿ ಮೃತಪಟ್ಟಿದ್ದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...