
ವಿಜಯನಗರ: ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ 17 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ಬಳಿ ನಡೆದಿದೆ.
ಕಾನಹೊಳ್ಳಿ ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ. ಪರಪ್ಪ ಎಂಬುವವರಿಗೆ ಸೇರಿದ 13 ಕುರಿಗಳು, 2 ಟಗರು, 2 ಮೇಕೆ ಮೃತಪಟ್ಟಿವೆ. ಸಧ್ಯ ಕುರಿಗಳ ಪಕ್ಕದಲ್ಲೇ ಇದ್ದ ಪರಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕುರಿ ಮೇಯಿಸಲು ಹೋದಾಗ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಪಶುವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.