alex Certify ತೆಂಗಿನಕಾಯಿ ಕದ್ದಿದ್ದಾನೆಂದು ಕಂಬಕ್ಕೆ ಕಟ್ಟಿ ಥಳಿಸಿದ ಮಾಲೀಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆಂಗಿನಕಾಯಿ ಕದ್ದಿದ್ದಾನೆಂದು ಕಂಬಕ್ಕೆ ಕಟ್ಟಿ ಥಳಿಸಿದ ಮಾಲೀಕ

ತುಮಕೂರು : ತಮ್ಮ ತೋಟದಲ್ಲಿ ಯುವಕ ಮೂರು ತೆಂಗಿನಕಾಯಿಗಳನ್ನು ಕಳ್ಳತನ ಮಾಡಿದ್ದಾನೆಂದು ಆರೋಪಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ತಾವರೆಕೆರೆಯಲ್ಲಿ ಬೆಳಕಿಗೆ ಬಂದಿದ್ದು, ಹರೀಶ್ ಎಂಬ ವ್ಯಕ್ತಿಯನ್ನೇ ತೋಟದ ಮಾಲೀಕ ಥಳಿಸಿದ್ದಾನೆ. ತೆಂಗಿನ ತೋಟದ ಮಾಲೀಕ ರಾಜು ಎಂಬ ವ್ಯಕ್ತಿಯೇ ಈ ರೀತಿ ಅಮಾನವೀಯವಾಗಿ ಥಳಿಸಿದವ.

ರಾಜುನ ತೋಟದಲ್ಲಿ ಹರೀಶ್ ಮೂರು ತೆಂಗಿನಕಾಯಿ ಕದ್ದಿದ್ದಾನೆ ಎಂದು, ಆತನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ, ತೆಂಗಿನಕಾಯಿ ಸರವನ್ನು ಕೊರಳಿಗೆ ಹಾಕಿ ಮನಸೋ ಇಚ್ಛೆ ಥಳಿಸಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ಹರೀಶ್ ಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.

ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಹರೀಶನ್ ತಂದೆ ಗಂಗಾಧರಯ್ಯ ಎಂಬುವವರು ಈ ಕುರಿತು ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...