alex Certify ತೆಂಗಿನಕಾಯಿ ಕೀಳಲು ಮರ ಹತ್ತಿದ್ದ ವೇಳೆಯೇ ಹೃದಯಾಘಾತ; ಕ್ರೇನ್ ಮೂಲಕ ಶವ ಕೆಳಗಿಳಿಸಿದ ಅಗ್ನಿಶಾಮಕ ಸಿಬ್ಬಂದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆಂಗಿನಕಾಯಿ ಕೀಳಲು ಮರ ಹತ್ತಿದ್ದ ವೇಳೆಯೇ ಹೃದಯಾಘಾತ; ಕ್ರೇನ್ ಮೂಲಕ ಶವ ಕೆಳಗಿಳಿಸಿದ ಅಗ್ನಿಶಾಮಕ ಸಿಬ್ಬಂದಿ

ವ್ಯಕ್ತಿಯೊಬ್ಬರು ತೆಂಗಿನಕಾಯಿ ಕೀಳುವ ಸಲುವಾಗಿ ಮರ ಹತ್ತಿದ್ದ ವೇಳೆಯೇ ತೀವ್ರ ಹೃದಯಘಾತಕ್ಕೆ ಒಳಗಾಗಿ ಮೃತಪಟ್ಟಿದ್ದು, ಬಳಿಕ ಅವರ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕ್ರೇನ್ ಮೂಲಕ ಕೆಳಗಿಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು ಮೈಲಸಂದ್ರ ನಿವಾಸಿ ನಾರಾಯಣಪ್ಪ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಕೂಲಿ ಕಾರ್ಮಿಕರಾಗಿದ್ದ ನಾರಾಯಣಪ್ಪ ಜೊತೆಗೆ ತೆಂಗಿನಕಾಯಿ ಕಿತ್ತು ಕೊಡುವ ಕೆಲಸವನ್ನೂ ಮಾಡುತ್ತಿದ್ದರು.

ಸೋಮವಾರದಂದು ಮೈಲಸಂದ್ರದ ವೆಂಕಟರಮಣ ದೇವಾಲಯದ ಆವರಣದಲ್ಲಿರುವ ತೆಂಗಿನ ಮರದಿಂದ ಕಾಯಿ ಕೀಳಲು ಅವರು ಹತ್ತಿದ್ದರು. ಆದರೆ ಎಷ್ಟೊತ್ತಾದರೂ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಕರೆಸಲಾಗಿತ್ತು.

ಅವರು ಬಂದು ಪರಿಶೀಲಿಸಿದ ವೇಳೆ ನಾರಾಯಣಪ್ಪ ಮರದ ಮೇಲೆ ಮೃತಪಟ್ಟಿರುವುದು ಕಂಡು ಬಂದಿದೆ. ಬಳಿಕ ಕ್ರೇನ್ ಸಹಾಯದಿಂದ ಅವರ ಪಾರ್ಥಿವ ಶರೀರವನ್ನು ಕೆಳಗಿಳಿಸಲಾಗಿದ್ದು, ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...