alex Certify ದಂಪತಿ ಸಾವಿಗೆ ಕಾರಣವಾಯ್ತು ಮೊಬೈಲ್ ಗೆ ಬಂದ ಮೆಸೇಜ್….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಂಪತಿ ಸಾವಿಗೆ ಕಾರಣವಾಯ್ತು ಮೊಬೈಲ್ ಗೆ ಬಂದ ಮೆಸೇಜ್….!

ಮೊಬೈಲ್ ಇಂದು ಎಲ್ಲರಿಗೂ ಅನಿವಾರ್ಯ ಎನ್ನುವ ಮಟ್ಟಿಗೆ ಆಗಿದ್ದು, ಕೆಲವೊಮ್ಮೆ ಇದು ಅನಾಹುತಕ್ಕೂ ಕಾರಣವಾಗುತ್ತದೆ ಎಂಬುದು ಈ ಘಟನೆಯಿಂದ ಸಾಬೀತಾಗಿದೆ. ಹೌದು, ಮೊಬೈಲ್ ಗೆ ಬಂದ ಒಂದು ಮೆಸೇಜ್ ದಂಪತಿಗಳ ಸಾವಿಗೆ ಕಾರಣವಾಗಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಯಾದಲಗಟ್ಟಿ ಗ್ರಾಮದಲ್ಲಿ ಈ ದುರಂತ ಘಟನೆ ನಡೆದಿದ್ದು, ಮಹಾಂತೇಶ ಹಾಗೂ ಆತನ ಪತ್ನಿ ಶೈಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಿಂದಾಗಿ ಇವರ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.

9 ವರ್ಷದ ಹಿಂದೆ ದಂಪತಿಯ ವಿವಾಹವಾಗಿದ್ದು, ಕಳೆದೆರಡು ವರ್ಷಗಳಿಂದ ಇಬ್ಬರ ನಡುವೆ ಪದೇ ಪದೇ ಕಲಹ ನಡೆಯುತ್ತಿತ್ತೆಂದು ಹೇಳಲಾಗಿದೆ. ಪತ್ನಿ ಶೈಲಾ ಸದಾಕಾಲ ಮೊಬೈಲ್ನಲ್ಲೇ ಮುಳುಗುತ್ತಿದ್ದರಿಂದ ಮಹಾಂತೇಶ್ ಆಕ್ಷೇಪ ವ್ಯಕ್ತಪಡಿಸಿದ್ದ ಎನ್ನಲಾಗಿದೆ.

ಶನಿವಾರ ಆಕೆಯ ಮೊಬೈಲ್ ಗೆ ಬಂದ ಮೆಸೇಜ್ ಕಂಡ ಮಹಾಂತೇಶ್ ಜಗಳ ಆರಂಭಿಸಿದ್ದು, ಇದರಿಂದ ಮನನೊಂದ ಶೈಲಾ ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತ್ನಿಯ ಸಾವಿನಿಂದ ಭಯಗೊಂಡ ಮಹಾಂತೇಶ್ ಸೋಮವಾರ ಬೆಳಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ತಳಕು ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...