ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಆಚರಿಸಲಾಗುತ್ತಿರುವ ದಸರಾ ಅಂಗವಾಗಿ ಅ. 2 ರಂದು ಗಾಂಧಿ ಪಾರ್ಕ್ ನಲ್ಲಿ ನಡೆಯುವ ರಾಜ್ಯಮಟ್ಟದ ಶ್ವಾನ ಪ್ರದರ್ಶನವನ್ನು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ಪ್ರಖ್ಯಾತ ಅಂತರಾಷ್ಟ್ರೀಯ ಶ್ವಾನ ತಳಿಯ ಸಂಶೋಧಕ ಸತೀಶ್ ಕಾಡಬೋಮ್ಸ್ ಆಗಮಿಸಲಿದ್ದಾರೆ.
ಶ್ವಾನ ಪ್ರದರ್ಶನದಲ್ಲಿ ವಿಶೇಷ ಆಕರ್ಷಣೆಯಾಗಿ 10 ಕೋಟಿ ರೂ. ಮೌಲ್ಯದ ಟಿಬೆಟಿಯನ್ ಮಸ್ತೀಫ್ ಶ್ವಾನ ಆಗಮಿಸಲಿದೆ. ಸುಮಾರು 6 ಕೋಟಿ ರೂ. ಬೆಲೆ ಬಾಳುವ ರೋಲ್ಸ್ ರಾಯ್ ಕಾರ್ ನಲ್ಲಿ ಬೆಂಗಳೂರಿನಿಂದ ಆಗಮಿಸುವ ಇದು ಶ್ವಾನ ಪ್ರದರ್ಶನದಲ್ಲಿ ಒಂದು ಗಂಟೆ ಮಾತ್ರ ಮುಖ್ಯ ಅತಿಥಿಯಾಗಿರುತ್ತದೆ. ಇದಕ್ಕಾಗಿಯೇ ವಿಶೇಷ ಎಸಿ ವೇದಿಕೆ ಸೇರಿ ಹಲವು ವ್ಯವಸ್ಥೆ ಮಾಡಲಾಗಿದೆ.
ರಾಜ್ಯಮಟ್ಟದ ಶ್ವಾನ ಪ್ರದರ್ಶನ ಸ್ಪರ್ಧೆಗೆ 200 ರೂ. ಪ್ರವೇಶ ಶುಲ್ಕವಿದ್ದು, ವೀಕ್ಷಣೆಗೆ ಉಚಿತ ಪ್ರವೇಶವಿದೆ.