alex Certify ದಾರಿ ತಪ್ಪುತ್ತಿರುವ ಮುಸ್ಲಿಂ ಯುವಕರನ್ನು ಅವರ ಸಮುದಾಯದ ಹಿರಿಯರು ಹದ್ದುಬಸ್ತಿನಲ್ಲಿಡಲಿ: ಕೆ.ಎಸ್.ಈಶ್ವರಪ್ಪ ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಾರಿ ತಪ್ಪುತ್ತಿರುವ ಮುಸ್ಲಿಂ ಯುವಕರನ್ನು ಅವರ ಸಮುದಾಯದ ಹಿರಿಯರು ಹದ್ದುಬಸ್ತಿನಲ್ಲಿಡಲಿ: ಕೆ.ಎಸ್.ಈಶ್ವರಪ್ಪ ಸಲಹೆ

ಶಿವಮೊಗ್ಗ: ದಾರಿ ತಪ್ಪುತ್ತಿರುವ ಮುಸ್ಲಿಂ ಯುವಕರನ್ನು ಅವರ ಸಮುದಾಯದ ಹಿರಿಯರು ಹದ್ದುಬಸ್ತಿನಲ್ಲಿ ಇಡದಿದ್ದರೆ ಅವರು ರಾಷ್ಟ್ರದ್ರೋಹಿಗಳಾಗಿ ಹೊರ ಹೊಮ್ಮುತ್ತಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮುಸ್ಲಿಂ ಹಿರಿಯರಿಗೆ ಕಿವಿಮಾತು ಹೇಳಿದ್ದಾರೆ.

ಅವರು ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಸ್.ಡಿ.ಪಿ.ಐ., ಪಿಎಫ್ಐ ಮುಂತಾದ ಸಂಘಟನೆಗಳು ರಾಷ್ಟ್ರದ್ರೋಹದ ಸಂಘಟನೆಗಳಾಗಿ ಹೊರ ಹೊಮ್ಮುತ್ತಿವೆ. ಬಿಜೆಪಿ ಇಂತಹ ಸಂಘಟನೆಗಳ ಬಗ್ಗೆ ಹುಷಾರಾಗಿರಬೇಕೆಂದು ಆಗಾಗ ಎಚ್ಚರಿಸುತ್ತಾ ಬಂದಿದೆ. ಆದರೂ, ಮುಸ್ಲಿಂ ಯುವಕರು ಪ್ರಚೋದನೆಗೆ ಒಳಗಾಗಿ ಐಎಸ್ಐ ಉಗ್ರ ಸಂಘಟನೆಗೆ ಸೇರುತ್ತಿದ್ದಾರೆ. ಇದು ತುಂಬಾ ಅಪಾಯಕಾರಿ ಎಂದರು.

ಮುಸ್ಲಿಂ ಸಮಾಜದ ಹಿರಿಯರು ಇವರನ್ನು ಹದ್ದುಬಸ್ತಿನಲ್ಲಿಡಬೇಕಾಗಿದೆ. ಇಲ್ಲದಿದ್ದರೆ ಇವರು ಬಾಂಬ್ ತಯಾರಿಸಿಯೋ ಅಥವಾ ತರಬೇತಿ ಪಡೆದೋ, ಚಾಕು ಚೂರಿ ಸಂಸ್ಕೃತಿ ಹೊಂದಿ ರಾಷ್ಟ್ರದ್ರೋಹಿಗಳಾಗಿ, ಭಯೋತ್ಪಾದಕರಾಗಿ ಜೈಲು ಸೇರುವುದು ಖಚಿತ. ಇಂತಹ ಸಂಘಟನೆಗಳಿಗೆ ವಿದೇಶಗಳಿಂದ ಕೋಟ್ಯಂತರ ರೂ. ಹರಿದು ಬರುತ್ತಿದೆ ಎಂದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...