alex Certify ದೇವಸ್ಥಾನದಲ್ಲೇ ಅರ್ಚಕನ ಕತ್ತು ಸೀಳಿ ಕೊಲೆ ಮಾಡಿದ ದುಷ್ಕರ್ಮಿಗಳು…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವಸ್ಥಾನದಲ್ಲೇ ಅರ್ಚಕನ ಕತ್ತು ಸೀಳಿ ಕೊಲೆ ಮಾಡಿದ ದುಷ್ಕರ್ಮಿಗಳು…..!

85 ವರ್ಷದ ದೇಗುಲದ ಅರ್ಚಕರನ್ನು ಬರ್ಬರವಾಗಿ ಹತ್ಯೆಗೈದ ಘಟನೆಯು ಗುರುಗ್ರಾಮ್​ನ ಸೆಕ್ಟರ್​ 65ರ ಕದರ್​ಪುರ ಪಾರಿವಾಳ ದೇವಸ್ಥಾನದಲ್ಲಿ ನಡೆದಿದೆ.

ಹರಿತವಾದ ಆಯುಧದಿಂದ ಅರ್ಚಕನ ಕತ್ತನ್ನು ಸೀಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇಂದು ಬೆಳಗ್ಗೆ ಅಲ್ಲಿನ ಸ್ಥಳೀಯರು ಪೂಜೆಗೆಂದು ದೇವಸ್ಥಾನಕ್ಕೆ ತೆರಳಿದ ವೇಳೆಯಲ್ಲಿ ಅರ್ಚಕ ರಕ್ತದ ಮಡುವಿನಲ್ಲಿ ಬಿದ್ದಿರುವುದು ಗಮನಕ್ಕೆ ಬಂದಿದೆ. ಗಾಬರಿಗೊಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಪೊಲೀಸರು ವಿಧಿವಿಜ್ಞಾನ ತಜ್ಞರೊಂದಿಗೆ ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಮೃತರನ್ನು ಗೋವಿಂದ್ ದಾಸ್ (85) ಎಂದು ಗುರುತಿಸಲಾಗಿದ್ದು, ಕಳೆದ 30 ರಿಂದ 35 ವರ್ಷಗಳಿಂದ ದೇವಸ್ಥಾನದಲ್ಲಿ ಅರ್ಚಕರಾಗಿ ಜೀವನ ನಡೆಸುತ್ತಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se