alex Certify ದೇವಾಲಯಕ್ಕೆ ಭೇಟಿ ನೀಡಿ ಹಣೆಗೆ ‘ಕುಂಕುಮ’ ಇಟ್ಟುಕೊಂಡ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವಾಲಯಕ್ಕೆ ಭೇಟಿ ನೀಡಿ ಹಣೆಗೆ ‘ಕುಂಕುಮ’ ಇಟ್ಟುಕೊಂಡ ಸಿದ್ದರಾಮಯ್ಯ

ತಮಗೆ ಕುಂಕುಮ ಕಂಡರೆ ಭಯವಾಗುತ್ತದೆ ಎಂದು ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರಕ್ಕೆ ಈಗ ತೆರೆ ಎಳೆದಿದ್ದಾರೆ.

ಮಂಗಳವಾರದಂದು ಬೆಳಗಾವಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಶ್ರೀ ಮಳೆ ಕರ್ಣ ದೇವಾಲಯಕ್ಕೆ ಭೇಟಿ ನೀಡಿದ್ದ ಅವರು ದೇವರ ದರ್ಶನ ಪಡೆದು ಹಣೆಗೆ ಕುಂಕುಮ ಇಟ್ಟುಕೊಂಡಿದ್ದಾರೆ.

ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಶ್ರೀ ಮಳೆ ಕರ್ಣ ದೇವಾಲಯಕ್ಕೆ ಕರೆದುಕೊಂಡು ಹೋಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...