alex Certify ದೇವೇಗೌಡರ ವಿರುದ್ಧ ವಿವಾದಾತ್ಮಕ ಹೇಳಿಕೆ; ಕೆ.ಎನ್.ರಾಜಣ್ಣ ವಿರುದ್ಧ ಪ್ರತಿಭಟನೆಗೆ ಜೆಡಿಎಸ್ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವೇಗೌಡರ ವಿರುದ್ಧ ವಿವಾದಾತ್ಮಕ ಹೇಳಿಕೆ; ಕೆ.ಎನ್.ರಾಜಣ್ಣ ವಿರುದ್ಧ ಪ್ರತಿಭಟನೆಗೆ ಜೆಡಿಎಸ್ ಕರೆ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಶಾಸಕ ಕೆ.ಎನ್.ರಾಜಣ್ಣ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಮಧುಗಿರಿ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕ ಅನಿತಾ ಕುಮಾರಸ್ವಾಮಿ ವಿರುದ್ಧ ಸೋತ ದಿನದಿಂದಲೂ ಕೆ.ಎನ್.ರಾಜಣ್ಣ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಇದೀಗ ಜೆಡಿಎಸ್ ವಿರುದ್ಧದ ಆಕ್ರೋಶ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಿರುದ್ಧ ವಿವಾದಾತ್ಮಕವಾಗಿ ಹೇಳಿಕೆ ನಿಡುವವರೆಗೂ ಮುಂದುವರೆದಿದೆ.

ರಾಜಣ್ಣ ಹೇಳಿಕೆ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ನಾಳೆ ಮಧುಗಿರಿಯಲ್ಲಿ ಕೆ.ಎನ್.ರಾಜಣ್ಣ ವಿರುದ್ಧ ಬೃಹತ್ ಪ್ರತಿಭಟನೆಗೆ ಶಾಸಕ ವೀರಭದ್ರಯ್ಯ ಕರೆ ನೀಡಿದ್ದಾರೆ. ಮಾಜಿ ಪ್ರಧಾನಿ, ರಾಷ್ಟ್ರೀಯ ನಾಯಕರನ್ನು ರಾಜಣ್ಣ ಕೀಳಾಗಿ ಮಾತನಾಡಿದ್ದು, ವಿಷಾದನೀಯ. ನಾಳೆ ರಾಜಣ್ಣ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...