alex Certify ನಕಲಿ ಅಂಕಪಟ್ಟಿ ನೀಡಿ ಪ್ರಥಮ ದರ್ಜೆ ಸಹಾಯಕ ಹುದ್ದೆ ಪಡೆಯಲು ಯತ್ನ; ಯುವಕನ ವಿರುದ್ಧ ದೂರು ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಕಲಿ ಅಂಕಪಟ್ಟಿ ನೀಡಿ ಪ್ರಥಮ ದರ್ಜೆ ಸಹಾಯಕ ಹುದ್ದೆ ಪಡೆಯಲು ಯತ್ನ; ಯುವಕನ ವಿರುದ್ಧ ದೂರು ದಾಖಲು

ಬೆಂಗಳೂರು: ಅನುಕಂಪದ ಆಧಾರದ ಮೇಲೆ ನಕಲಿ ಅಂಕಪಟ್ಟಿ ನೀಡಿ ಪ್ರಥಮ ದರ್ಜೆ ಸಹಾಯಕ ಹುದ್ದೆ ಗಿಟ್ಟಿಸಲು ಯತ್ನಿಸಿದ್ದ ಯುವಕನೋರ್ವನನ್ನು ಬಂಧಿಸಲಾಗಿದೆ.

ಸಿದ್ಧಲಿಂಗೇಶ ಗಂಗಾಧರ ಬದ್ನಿ ಎಂಬಾತನ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ವಿಷ್ಣುವರ್ಧನ ರೆಡ್ಡಿ ದೂರು ನೀಡಿದ್ದಾರೆ.

ಇಲಾಖೆ ಸೇವೆಯಲ್ಲಿರುವಾಗ ಸಿದ್ಧಲಿಂಗೇಶ ಅವರ ತಂದೆ ಗಂಗಾಧರ ಬದ್ನಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಅನುಕಂಪದ ಆಧಾರದಲ್ಲಿ ಅವರ ಮಗ ಸಿದ್ದಲಿಂಗೇಶ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದ. ಆರಂಭದಲ್ಲಿ ಬಾಗಲಕೋಟೆ ಉಪನಿರ್ದೇಶಕರ ಕಚೇರಿಗೆ ದ್ವಿತಿಯ ದರ್ಜೆ ಸಹಾಯಕ ಹುದ್ದೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದ. ಆ ನಂತರ ಪದವಿ ಪ್ರಮಾಣ ಪತ್ರ ನೀಡಿ ಪ್ರಥಮ ದರ್ಜೆ ಹುದ್ದೆ ನೀಡುವಂತೆ ಕೇಳಿಕೊಂಡಿದ್ದ. ನೇಮಕಾತಿ ಸಂದರ್ಭದಲ್ಲಿ ದಾಖಲಾತಿ ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ನೀಡಿರುವುದು ಪತ್ತೆಯಾಗಿದೆ.

ಇಲಾಖೆಗೆ ವಂಚಿಸಿದ ಆರೋಪದಲ್ಲಿ ಸಿದ್ಧಲಿಂಗೇಶ್ವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...