alex Certify ನಗರಸಭಾ ಸದಸ್ಯರಿಗೆ ಸಚಿವ ಆನಂದ್ ಸಿಂಗ್ ರಿಂದ ‘ಬಂಪರ್ ಗಿಫ್ಟ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಗರಸಭಾ ಸದಸ್ಯರಿಗೆ ಸಚಿವ ಆನಂದ್ ಸಿಂಗ್ ರಿಂದ ‘ಬಂಪರ್ ಗಿಫ್ಟ್’

ದೀಪಾವಳಿ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಹೊಸಪೇಟೆ ನಗರಸಭೆ ಸದಸ್ಯರು ಹಾಗೂ ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯತಿ ಸದಸ್ಯರಿಗೆ ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ.

ಪ್ರತಿಯೊಬ್ಬ ನಗರಸಭಾ ಸದಸ್ಯರಿಗೆ ಒಂದು ಲಕ್ಷ ರೂಪಾಯಿ ನಗದು, ಒಂದು ಕೆಜಿ ಬೆಳ್ಳಿ, ರೇಷ್ಮೆ ಸೀರೆ, ಪಂಚೆ, ಶರ್ಟ್, ಮುತ್ತಿನ ಹಾರ ಹಾಗೂ ಡ್ರೈಫ್ರೂಟ್ಸ್ ಹೊಂದಿರುವ ಡಬ್ಬಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹಾಗೆಯೇ ಪ್ರತಿಯೊಬ್ಬ ಗ್ರಾಮ ಪಂಚಾಯಿತಿ ಸದಸ್ಯರಿಗೆ 27 ಸಾವಿರ ರೂಪಾಯಿ ನಗದು, 500 ಗ್ರಾಂ ಬೆಳ್ಳಿ ಜೊತೆಗೆ ಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಈಗಾಗಲೇ ಈ ಗಿಫ್ಟ್ ಅನ್ನು ಪ್ರತಿಯೊಬ್ಬರಿಗೂ ಖುದ್ದಾಗಿ ಸಚಿವ ಆನಂದ್ ಸಿಂಗ್ ಅವರ ಬೆಂಬಲಿಗರೇ ತಲುಪಿಸುತ್ತಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...