alex Certify ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ನಿಧನ; ಚುನಾವಣೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ನಿಧನ; ಚುನಾವಣೆ ಮುಂದೂಡಿಕೆ

ಶಿರಾ: ರಾಜ್ಯದಲ್ಲಿನ ಕೆಲವು ಸ್ಥಳೀಯ ಸಂಸ್ಥೆಗಳ ಚುನಾವಣೆ ಸೋಮವಾರ ನಡೆಯುತ್ತಿದ್ದು, ಈ ಮಧ್ಯೆ ಶಿರಾದಲ್ಲಿ ಚುನಾವಣೆ ಮುಂದೂಡಿಕೆಯಾಗಿದೆ.

ಇಲ್ಲಿಯ ನಗರಸಭೆಯ 21ನೇ ವಾರ್ಡ್ ನಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ನ ಅಭ್ಯರ್ಥಿ ಚಾಂದ್ ಪಾಷಾ ಎಂಬುವವರು ಸಾವನ್ನಪ್ಪಿದ್ದು, ಈ ವಾರ್ಡಿನ ಚುನಾಣೆಯನ್ನು ಮುಂದೂಡಲಾಗಿದೆ.

ಚಾಂದ್ ಪಾಷಾ ಅವರು ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾರೆ. ಈ ವಾರ್ಡ್ ನ್ನು ಹೊರತುಪಡಿಸಿ ಇನ್ನುಳಿದ ಶಿರಾದ ಎಲ್ಲ ವಾರ್ಡ್ ಗಳಿಗೆ ಚುನಾವಣೆಯು ಡಿ. 27ರಂದು ನಡೆಯಲಿದೆ.

ರಾಜ್ಯದ ಕೆಲವು ನಗರಸಭೆ, ಪುರಸಭೆ ಹಾಗೂ ಗ್ರಾಪಂಗಳಿಗೆ ಸೋಮವಾರ ಮತದಾನ ಪ್ರಕ್ರಿಯೆ ನಡೆಯಲಿದೆ. ಇದಕ್ಕಾಗಿ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತಗಳು ಸಕಲ ಸಿದ್ಧತೆ ಮಾಡಿಕೊಂಡಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...