alex Certify ನನಗೆ ನಿರೀಕ್ಷೆ ಇರಲಿಲ್ಲ, ಇದು ಸಂಪೂರ್ಣ ರಾಯರ ಆಶಿರ್ವಾದ; ರಾಜ್ಯಸಭೆಗೆ ಬಿಜೆಪಿಯಿಂದ ಟಿಕೆಟ್ ಬಗ್ಗೆ ಸಂತಸ ಹಂಚಿಕೊಂಡ ನಟ ಜಗ್ಗೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನಗೆ ನಿರೀಕ್ಷೆ ಇರಲಿಲ್ಲ, ಇದು ಸಂಪೂರ್ಣ ರಾಯರ ಆಶಿರ್ವಾದ; ರಾಜ್ಯಸಭೆಗೆ ಬಿಜೆಪಿಯಿಂದ ಟಿಕೆಟ್ ಬಗ್ಗೆ ಸಂತಸ ಹಂಚಿಕೊಂಡ ನಟ ಜಗ್ಗೇಶ್

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ನಟ ಜಗ್ಗೇಶ್ ಅವರಿಗೆ ಟಿಕೆಟ್ ನೀಡಲಾಗಿದ್ದು, ಈ ಬಗ್ಗೆ ಸಂತಸದ ಜತೆಗೆ ಸ್ವತಃ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ನನಗೆ ಯಾವುದೇ ನಿರೀಕ್ಷೆ ಇರಲಿಲ್ಲ. ಬಹಳ ನಿಷ್ಠೆಯಿಂದ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ಮುಖ್ಯಮಂತ್ರಿಗಳು, ಸ್ನೇಹಿತ ಶಾಸಕರು, ಸಂಘದ ಹಿರಿಯರು ಎಲ್ಲರೂ ಸೇರಿ ಈ ನಿರ್ಧಾರ ಮಾಡಿ ಟಿಕೆಟ್ ಕೊಟ್ಟಿದ್ದಾರೆ. ಪಕ್ಷ ಹಾಗೂ ಸಂಘಟನೆಗೆ ಧನ್ಯವಾದಗಳು ಎಂದರು.

ಹಿರಿಯರು ನನಗೆ ಫೋನ್ ಮಾಡಿ ದಾಖಲೆ ರೆಡಿ ಮಾಡಿಕೊಳ್ಳಲು ಹೇಳಿದರು ಅಚ್ಚರಿಯಾಯಿತು. ನಿಜಕ್ಕೂ ಇದು ರಾಯರ ಪವಾಡ. ರಾಯರ ಸಂಪೂರ್ಣ ಆಶಿರ್ವಾದದಿಂದ ಟಿಕೆಟ್ ಸಿಕ್ಕಿದೆ. ನಾಳೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದರು.

ನನಗೆ ನಿರೀಕ್ಷೆ ಇಲ್ಲದ್ದರಿಂದ ದಾಖಲೆ ಸಂಗ್ರಹಕ್ಕೆ ಸ್ವಲ್ಪ ವಿಳಂಬವಾಗಿದೆ. ಇಂದು ಎಲ್ಲಾ ದಾಖಲೆಗಳನ್ನು ಸಂಗ್ರಹಿಸುತ್ತೇನೆ. ನಾಳೆ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...