alex Certify ನನ್ನನ್ನು ಸೋಲಿಸಲು ಬಿಜೆಪಿ – ಜೆಡಿಎಸ್ ಒಳ ಒಪ್ಪಂದ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನ್ನನ್ನು ಸೋಲಿಸಲು ಬಿಜೆಪಿ – ಜೆಡಿಎಸ್ ಒಳ ಒಪ್ಪಂದ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿನ ವರುಣಾ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಪುತ್ರ ಯತೀಂದ್ರ ಸೇರಿದಂತೆ ಅಪಾರ ಬೆಂಬಲಿಗಳೊಂದಿಗೆ ಆಗಮಿಸಿದ ಅವರು ನಾಮಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಸಿದ್ದರಾಮಯ್ಯ, ನನ್ನನ್ನು ಸೋಲಿಸಲು ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ. ವರುಣಾ ಕ್ಷೇತ್ರದಲ್ಲಿ ಈ ಬಾರಿ ಹಣದ ಹೊಳೆಯನ್ನೇ ಹರಿಸಲಿದ್ದು, ಆದರೆ ಕ್ಷೇತ್ರದ ಜನತೆ ಇದ್ಯಾವುದಕ್ಕೂ ಜಗ್ಗುವವರಲ್ಲ ಎಂದರು.

ನಾನು ನಾಮಪತ್ರ ಸಲ್ಲಿಸಿದ ಬಳಿಕ ರಾಜ್ಯದಾದ್ಯಂತ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯ ಮಾಡಬೇಕಿದೆ. ಪುತ್ರ ಯತೀಂದ್ರ ಹಾಗೂ ಪಕ್ಷದ ಕಾರ್ಯಕರ್ತರು ಇಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. ಇದು ನನ್ನ ಕೊನೆಯ ಚುನಾವಣೆಯಾಗಿರುವ ಕಾರಣ ವರುಣಾದಿಂದಲೇ ಕಣಕ್ಕಿಳಿಯುತ್ತಿದ್ದೇನೆ. ಕ್ಷೇತ್ರದ ಜನತೆ ನನ್ನನ್ನು ಆಶೀರ್ವದಿಸಿ ಎಂದು ಮನವಿ ಮಾಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...