alex Certify ನನ್ನ ಮಗನಿಗೆ ಯಾರೂ ಸಾಲ ಕೊಡಬೇಡಿ….! ಮಾಜಿ ಶಾಸಕರಿಂದ ಬಹಿರಂಗ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನ್ನ ಮಗನಿಗೆ ಯಾರೂ ಸಾಲ ಕೊಡಬೇಡಿ….! ಮಾಜಿ ಶಾಸಕರಿಂದ ಬಹಿರಂಗ ಮನವಿ

ನನ್ನ ಮಗನಿಗೆ ಯಾರೂ ಸಾಲ ಕೊಡಬೇಡಿ. ನನ್ನ ಹೆಸರನ್ನು ಬಳಸಿಕೊಂಡು ಸಾರ್ವಜನಿಕರಿಗೆ ಸುಳ್ಳು ಭರವಸೆ ನೀಡಿ ಆತ ಸಾಲ ಪಡೆದುಕೊಳ್ಳುತ್ತಿದ್ದಾನೆ. ಹೀಗಾಗಿ ಆತನಿಗೆ ಹಣ ನೀಡಬೇಡಿ ಎಂದು ಮಾಜಿ ಶಾಸಕರೊಬ್ಬರು ಮನವಿ ಮಾಡಿದ್ದಾರೆ.

ಹೌದು, ಮುಂಡಗೋಡು ಕ್ಷೇತ್ರದ ಮಾಜಿ ಶಾಸಕ, ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್. ಪಾಟೀಲ್ ಈ ರೀತಿ ಮನವಿ ಮಾಡಿಕೊಂಡಿದ್ದು, ದುಶ್ಚಟಗಳಿಗೆ ಬಲಿಯಾಗಿರುವ ತಮ್ಮ ಮಗನ ನಡತೆಯಿಂದ ಅವರು ಬೇಸತ್ತಿದ್ದಾರೆ ಎಂದು ಹೇಳಲಾಗಿದೆ.

ಇವರ ಪುತ್ರ ಬಾಪುಗೌಡ ಪಾಟೀಲ್ ಪದವೀಧರನಾಗಿದ್ದು, ಆದರೆ ಕಳೆದ ಕೆಲವು ವರ್ಷಗಳಿಂದ ದುಶ್ಚಟಕ್ಕೆ ಬಲಿಯಾಗಿ ಕೋಟಿಗಟ್ಟಲೆ ಸಾಲ ಮಾಡಿದ್ದಾನೆ ಎಂದು ಹೇಳಲಾಗಿದೆ. ಇದನ್ನು ತೀರಿಸಲು ಈಗಾಗಲೇ ಈತನ ಹೆಸರಿನಲ್ಲಿರುವ ಆಸ್ತಿಯನ್ನೆಲ್ಲ ಮಾರಾಟ ಮಾಡಿದ್ದಾನೆ.

ಇದೀಗ ತಮ್ಮ ತಂದೆಯವರ ಹೆಸರನ್ನು ಬಳಸಿಕೊಂಡು ಸಾರ್ವಜನಿಕರಿಗೆ ಸುಳ್ಳು ಭರವಸೆ ನೀಡಿ ಸಾಲ ಕೇಳುತ್ತಿದ್ದಾನೆ ಎನ್ನಲಾಗಿದ್ದು, ಹೀಗಾಗಿ ಮಾಜಿ ಶಾಸಕ ವಿ.ಎಸ್. ಪಾಟೀಲ್, ಮಗನಿಗೆ ಸಾಲ ನೀಡಬೇಡಿ ಎಂದು ಬಹಿರಂಗವಾಗಿ ಮನವಿ ಮಾಡಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...