alex Certify ನನ್ನ ಹುಟ್ಟು ಹಬ್ಬದ ಆಚರಣೆಯಿಂದ ಬಿಜೆಪಿಯವರಿಗೇಕೆ ನಡುಕ: ಸಿದ್ದರಾಮಯ್ಯ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನ್ನ ಹುಟ್ಟು ಹಬ್ಬದ ಆಚರಣೆಯಿಂದ ಬಿಜೆಪಿಯವರಿಗೇಕೆ ನಡುಕ: ಸಿದ್ದರಾಮಯ್ಯ ಪ್ರಶ್ನೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬ ಆಚರಣೆಗಾಗಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಈ ಸಮಾರಂಭದ ಕುರಿತು ಪರ – ವಿರೋಧದ ಅಭಿಪ್ರಾಯಗಳು ಕೇಳಿ ಬರುತ್ತಿವೆ. ವ್ಯಾಪಕ ಮಳೆ ಆಗುತ್ತಿರುವ ಸಂದರ್ಭದಲ್ಲಿ ಇಂತಹ ಆಚರಣೆ ಬೇಕಿತ್ತಾ ಎಂಬ ಮಾತನ್ನು ವಿರೋಧ ಪಕ್ಷಗಳ ನಾಯಕರು ಹೇಳುತ್ತಿದ್ದಾರೆ.

ಆದರೆ ಸಿದ್ದರಾಮಯ್ಯನವರ ಬೆಂಬಲಿಗರು, 75ನೇ ವರ್ಷಕ್ಕೆ ಕಾಲಿಡಲಿರುವ ಸಿದ್ದರಾಮಯ್ಯನವರನ್ನು ಅಭಿನಂದಿಸಲು ಇದನ್ನು ಏರ್ಪಡಿಸಲಾಗಿದೆ. ಆರಂಭದಲ್ಲಿ ಸಿದ್ದರಾಮಯ್ಯ ಇದಕ್ಕೆ ಒಪ್ಪಿಕೊಂಡಿರಲಿಲ್ಲ. ಕೊನೆಗೆ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಇದಕ್ಕೆ ಸಮ್ಮತಿಸಿದ್ದಾರೆ ಎಂದು ಹೇಳುತ್ತಿದ್ದಾರೆ. ಜೊತೆಗೆ ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಲ್ಲ ಎಂದೂ ಸಹ ಸ್ಪಷ್ಟಪಡಿಸಿದ್ದಾರೆ.

ಇದರ ಮಧ್ಯೆ ಸ್ವತಃ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಣೆ ಕುರಿತು ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದು, ಈ ಸಮಾರಂಭ ನಮ್ಮ ಪಕ್ಷದ ಇತರೆ ನಾಯಕರಿಗೆ ನಡುಕ ತಂದಿಲ್ಲ. ಆದರೆ ಬಿಜೆಪಿಯವರಿಗೆ ನಡುಕ ಶುರುವಾಗಿದೆ. ಈ ಹಿಂದೆ ಯಡಿಯೂರಪ್ಪನವರ 75ನೇ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಸ್ವತಃ ನಾನು ಅಲ್ಲಿಗೆ ತೆರಳಿ ಅವರಿಗೆ ಅಭಿನಂದಿಸಿದ್ದೆ ಎಂದು ತಿರುಗೇಟು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...