alex Certify ನಾಡಧ್ವಜಕ್ಕೆ ಬೆಂಕಿ ಹಚ್ಚಿದ್ದ ಟೆಕ್ಕಿ ಅಂದರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಡಧ್ವಜಕ್ಕೆ ಬೆಂಕಿ ಹಚ್ಚಿದ್ದ ಟೆಕ್ಕಿ ಅಂದರ್

ಖಾಸಗಿ ಸಂಸ್ಥೆಯೊಂದರ 30 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಭಾನುವಾರ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಕರ್ನಾಟಕ ಧ್ವಜವನ್ನು ಸುಟ್ಟು ಹಾಕಿದ್ದಾನೆ.

ಪೊಲೀಸರು ವಾರಣಾಸಿ ಮೂಲದ ಅಮೃತೇಶ್ ತಿವಾರಿ ಎಂಬಾತನನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ದೆಹಲಿಯ ಐಐಟಿಯಲ್ಲಿ ಓದಿರುವ ತಿವಾರಿ ಕಳೆದ ಎರಡು ತಿಂಗಳಿಂದ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಂಗಿಪಾಳ್ಯದ 24ನೇ ಮೇನ್‌ನ 22ನೇ ಕ್ರಾಸ್‌ನಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬರು ಕರ್ನಾಟಕ ಧ್ವಜಕ್ಕೆ ಬೆಂಕಿ ಹಚ್ಚಿದ ಬಗ್ಗೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತ ನವೀನ್ ನರಸಿಂಹ ಎಚ್‌ಎಸ್‌ಆರ್ ಲೇಔಟ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಘಟನೆ ವೇಳೆ ಕಾರ್ಯಕರ್ತ ಆರೋಪಿಯಿಂದ ಧ್ವಜವನ್ನು ಕಸಿದುಕೊಂಡು ಬೆಂಕಿಯನ್ನು ನಂದಿಸಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...