alex Certify ನಾನು ಕೂಡ ಮುಂದಿನ ಸಿಎಂ ಅಭ್ಯರ್ಥಿ; ನನಗೆ ಶಕ್ತಿ ಇಲ್ವಾ ? ಪುನರುಚ್ಛರಿಸಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾನು ಕೂಡ ಮುಂದಿನ ಸಿಎಂ ಅಭ್ಯರ್ಥಿ; ನನಗೆ ಶಕ್ತಿ ಇಲ್ವಾ ? ಪುನರುಚ್ಛರಿಸಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ: ನಾನು ಕೂಡ ಕಾಂಗ್ರೆಸ್ ನ ಮುಂದಿನ ಸಿಎಂ ಅಭ್ಯರ್ಥಿ ಎಂದು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಮಾತ್ರ ಮುಖ್ಯಮಂತ್ರಿ ಅಭ್ಯರ್ಥಿಗಳಲ್ಲ, ನಾನು ಕೂಡ ಸಿಎಂ ಹುದ್ದೆಯ ಆಕಾಂಕ್ಷಿ ಎಂದರು.

BIG NEWS: ಸ್ವಲ್ಪದರಲ್ಲಿಯೇ ತಪ್ಪಿದ ಭಾರಿ ದುರಂತ; ರಸ್ತೆ ಬದಿ ಪಲ್ಟಿಯಾದ ಮತ್ತೊಂದು ಖಾಸಗಿ ಬಸ್

ಮುಂಬರುವ ಚುನಾವಣೆಯಲ್ಲಿ ನಾನು ದಾವಣಗೆರೆ ದಕ್ಷಿಣದಿಂದ ಸ್ಪರ್ಧಿಸುತ್ತೇನೆ. ನನ್ನ ಬಳಿಯೂ ಹಣವಿದೆ, ಶಕ್ತಿಯಿದೆ. ಯಾಕೆ ನನಗೆ ಸಿಎಂ ಆಗುವ ಶಕ್ತಿಯಿಲ್ಲವೇ? ಎಂದು ಪ್ರಶ್ನಿಸಿದರು.

ದಾವಣಗೆರೆ ಉತ್ತರ ಕ್ಷೇತ್ರದಿಂದ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಶಾಮನೂರು, ಈ ಬಗ್ಗೆ ನನ್ನ ಬಳಿ ಮಾತನಾಡಿಲ್ಲ. ಬಿಜೆಪಿ ನಾಯಕರು ಅವರ ಸ್ಪರ್ಧೆ ಬಗ್ಗೆ ನನ್ನ ಬಳಿ ಯಾಕೆ ಚರ್ಚೆ ಮಾಡುತ್ತಾರೆ. ಮುಂದಿನ ತಿಂಗಳು 16ಕ್ಕೆ ನನ್ನ ಮೊಮ್ಮಗಳ ಮದುವೆ. ಸಿಎಂ ಬೊಮ್ಮಾಯಿ ಕೂಡ ಬರುತ್ತಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...