alex Certify ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ; ಸಚಿವ ಉಮೇಶ್ ಕತ್ತಿ ಹೊಸ ವರಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ; ಸಚಿವ ಉಮೇಶ್ ಕತ್ತಿ ಹೊಸ ವರಸೆ

ಬಾಗಲಕೋಟೆ: ನಾನೂ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ. ನನಗೂ ಕೂಡ ಸಿಎಂ ಆಗುವ ಎಲ್ಲಾ ಅರ್ಹತೆಗಳಿವೆ ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಸಚಿವರು, ನಾನು 9 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಎಲ್ಲಾ ಅರ್ಹತೆ ನನಗಿದೆ. ಯಾವುದೇ ಕಪ್ಪು ಚುಕ್ಕೆ ನನ್ನ ಮೇಲಿಲ್ಲ. ಸಿಎಂ ಬದಲಾದಾಗ ಅಥವಾ ಮುಂದಿನ ಚುನಾವಣೆಯಾದಾಗ ನಾನೂ ಸಿಎಂ ಸ್ಥಾನದ ಆಕಾಂಕ್ಷಿ. ಇನ್ನು 15 ವರ್ಷಗಳಲ್ಲಿ ನಾನು ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದರು.

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಪ್ರಸಿದ್ಧ ಮಾರುಕಟ್ಟೆ ‘ಬಂದ್’​

ಇನ್ನು ಸಚಿವ ಯೋಗೇಶ್ವರ್ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಕತ್ತಿ, ಆನೆ, ಅಂಬಾರಿ ಹೇಳಿಕೆಗಳು ಶೋಭೆ ತರಲ್ಲ. ಯೋಗೇಶ್ವರ್ ತಮ್ಮದೇ ಆದ ರೀತಿಯಲ್ಲಿ ವಾದ ಮಂಡಿಸ್ತಾರೆ. ಆದರೆ ಈಗ ರಾಜ್ಯಕ್ಕೆ ಒಬ್ಬರು ಮುಖ್ಯಮಂತ್ರಿ ಇದ್ದಾರೆ. ಒಳ್ಳೆಯ ರೀತಿಯಲ್ಲಿ ಕೆಲಸಗಳನ್ನೂ ಮಾಡುತ್ತಿದ್ದಾರೆ. ಮುಂದೆಯೂ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಈಗಲೇ ಅನಗತ್ಯ ಹೇಳಿಕೆಗಳನ್ನು ನಿಡುವುದು ಸರಿಯಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...