alex Certify ನಾಯಕತ್ವ ಬದಲಾವಣೆ: ಕುತೂಹಲ ಮೂಡಿಸಿದ ಈಶ್ವರಪ್ಪ ಸುದ್ದಿಗೋಷ್ಠಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಕತ್ವ ಬದಲಾವಣೆ: ಕುತೂಹಲ ಮೂಡಿಸಿದ ಈಶ್ವರಪ್ಪ ಸುದ್ದಿಗೋಷ್ಠಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಡುವ ಬಗ್ಗೆ ಪ್ರಸ್ತಾಪವಾಗಿದೆ.

ಆದರೆ, ನಳಿನ್ ಕುಮಾರ್ ಕಟೀಲ್ ನಾನು ಎಲ್ಲಿಯೂ ಆ ರೀತಿ ಮಾತನಾಡಿಲ್ಲ. ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಇಂದು ಬೆಳಗ್ಗೆ 9 ಗಂಟೆಗೆ ಶಿವಮೊಗ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಅವರ ಸುದ್ದಿಗೋಷ್ಠಿ ಕುತೂಹಲ ಮೂಡಿಸಿದೆ. ತುರ್ತು ಸುದ್ದಿಗೋಷ್ಠಿ ಕರೆದಿರುವ ಈಶ್ವರಪ್ಪ ಸಂಪುಟದಿಂದ ತಮ್ಮನ್ನು ಕೈಬಿಡುವ ಬಗ್ಗೆ ಪ್ರಸ್ತಾಪವಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...