alex Certify ನಾಳೆ ನಡೆಯಲಿದೆ ಭಾರತ ಹಾಗೂ ಶ್ರೀಲಂಕಾ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ನಡೆಯಲಿದೆ ಭಾರತ ಹಾಗೂ ಶ್ರೀಲಂಕಾ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ನಿನ್ನೆ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಣ ಮೊದಲನೇ ಟಿ ಟ್ವೆಂಟಿ ಪಂದ್ಯದಲ್ಲಿ ಕೇವಲ 2 ರನ್ ಗಳಿಂದ ಭಾರತ ರೋಚಕ ಜಯ ಸಾಧಿಸಿದ್ದು ನಾಳೆ ಎರಡನೇ ಟಿ ಟ್ವೆಂಟಿ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಬಳಗ ಸಿದ್ಧವಾಗಿದೆ. ನಿನ್ನೆಯ ಪಂದ್ಯದಲ್ಲಿ ಯುವ ಕ್ರಿಕೆಟಿಗ ವೇಗದ ಶಿವಂ ಮಾವಿ 4 ಓವರ್ ಗಳಲ್ಲಿ ಕೇವಲ 22ರನ್ ನೀಡುವ ಮೂಲಕ 4 ವಿಕೆಟ್ ಕಬಳಿಸಿ ಕ್ರಿಕೆಟ್‌ ಪ್ರೇಮಿಗಳ ಗಮನ ಸೆಳೆದಿದ್ದಾರೆ.

ಶ್ರೀಲಂಕಾ ತಂಡಕ್ಕೆ ನಾಳೆಯ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಮೂರು ಟಿ ಟ್ವೆಂಟಿ ಪಂದ್ಯದಲ್ಲಿ ಈಗಾಗಲೇ ಒಂದು ಪಂದ್ಯ ಸೋಲನುಭವಿಸಿರುವ ಶ್ರೀಲಂಕಾ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಯುವ ಕ್ರಿಕೆಟಿಗರನ್ನೊಳಗೊಂಡ ಭಾರತ ತಂಡ ಸರಣಿ ಕೈವಶ ಮಾಡಿಕೊಳ್ಳುವ ಹುಮ್ಮಸ್ಸಿನಲ್ಲಿದ್ದಾರೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್‌ ಅಸೊಶಿಯೇಶನ್ ಸ್ಟೇಡಿಯಂನಲ್ಲಿ ರಾತ್ರಿ 7 ಗಂಟೆಗೆ ಪಂದ್ಯ ಪ್ರಾರಂಭವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...