ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ ಅಟ್ಟಹಾಸದ ನಡುವೆ ರಾಜ್ಯದಲ್ಲಿಯೂ ಹೆಮ್ಮಾರಿಯ ಆತಂಕ ಎದುರಾಗಿದ್ದು, ವೈರಸ್ ತಡೆಗೆ ಕೈಗೊಳ್ಳಬೇಕಾದ ಮುಂಜಾಗೃತೆ ಬಗ್ಗೆ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
ತೀವ್ರ ಜ್ವರ, ಮೈಕೈ ನೋವು, ನಡುಕ, ತೊದಲುವಿಕೆ, ತಲೆನೋವು, ವಾಂತಿ, ನಿದ್ರಾಲಸ್ಯ, ಪ್ರಜ್ಞಾಹೀನತೆ- ಇವು ನಿಫಾ ವೈರಸ್ ಲಕ್ಷಣಗಳಾಗಿದ್ದು, ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರ ಸಲಹೆ ಪಡೆಯುವುದು ಉತ್ತಮ
ನಿಫಾ ಬಗ್ಗೆ ಜಾಗೃತಿ ಇರಲಿ:
* ಪ್ರಾಣಿಗಳು ಮತ್ತು ಪಕ್ಷಿಗಳು ಕಚ್ಚಿದ ಹಣ್ಣುಗಳನ್ನು ಸೇವಿಸಬಾರದು
* ಬಾವಲಿಗಳು ಅತಿ ಹೆಚ್ಚು ಕಂಡುಬರುವ ಪ್ರದೇಶಗಳಿಂದ ಸಂಗ್ರಹಿಸಿದ ನೀರು ಕುಡಿಯಬಾರದು
* ರೋಗಿಯ ಶರೀರ ಸ್ರಾವದೊಂದಿಗೆ (ಜೊಲ್ಲು, ಬೆವರು, ಮೂತ್ರ) ಸಂಪರ್ಕ ತಪ್ಪಿಸಿ
ವಾಹನ ಸವಾರರಿಗೆ ಖುಷಿ ಸುದ್ದಿ…..! ಆರ್ ಸಿ ಅವಧಿ ಮುಗಿದಿದ್ದರೆ ಚಿಂತೆ ಬೇಡ
ಈ ಕ್ರಮಗಳನ್ನು ಅನುಸರಿಸಿ:
* ಸೋಂಕಿತ ಪ್ರದೇಶಗಳಿಗೆ ಭೇಟಿ ನೀಡುವಾಗ ಪ್ರತಿಬಂಧಕ ಉಪಾಯಗಳನ್ನು ಕೈಗೊಳ್ಳಿ
*ಹಂದಿ, ಕುದುರೆ, ನಾಯಿ, ಬೆಕ್ಕುಗಳಂತಹ ಸೋಂಕಿತ ಜಾನುವಾರಗಳು ಮಧ್ಯಂತರ ಮೂಲಗಳಾಗಿರುವುದರಿಂದ ಪ್ರತ್ಯೇಕವಾಗಿಡಿ
* ಸೋಂಕಿತರ ಸಂಪರ್ಕದಿಂದ ದೂರವಿರಬೇಕು
* ರೋಗಿಗಳು ಬಳಸುವ ವಸ್ತುಗಳನ್ನು ಪ್ರತ್ಯೇಕವಾಗಿ ಶುಚಿಗೊಳಿಸಬೇಕು
* ಹಸ್ತಲಾಘವ ಕೊಡುವುದನ್ನು ತಪ್ಪಿಸಿ ಹಾಗೂ ಸೋಂಕಿತರ ಸಂಪರ್ಕಕ್ಕೆ ಬಂದ ಬಳಿಕ ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಿ
* ರೋಗಿಯನ್ನು ಉಪಚರಿಸುವಾಗ ಮಾಸ್ಕ್, ಗ್ಲೌಸ್ ಕಡ್ಡಾಯ
* ಎಲ್ಲಾ ರೀತಿಯ ಹಣ್ಣು, ತರಕಾರಿಗಳನ್ನು ಚೆನ್ನಾಗಿ ತೊಳೆದು ಉಪಯೋಗಿಸಿ