alex Certify ನಿರುದ್ಯೋಗ ಸಮಸ್ಯೆ ತೊಲಗಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಉದ್ಯೋಗ ನೀತಿ ಜಾರಿ – ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗ ಸಮಸ್ಯೆ ತೊಲಗಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಉದ್ಯೋಗ ನೀತಿ ಜಾರಿ – ಸಿಎಂ ಬೊಮ್ಮಾಯಿ

ಬೆಳಗಾವಿ : ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ತೊಲಗಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಉದ್ಯೋಗ ನೀತಿ ಜಾರಿಗೊಳಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಜಿಲ್ಲೆಯ ಗೋಗಟೆಯಲ್ಲಿನ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಉದ್ಯೋಗ ನೀತಿಯ ಮೂಲಕ ಯುವ ಪೀಳಿಗೆಯ ಸಮಸ್ಯೆಯಾಗಿರುವ ನಿರುದ್ಯೋಗಕ್ಕೆ ಮುಕ್ತಿ ಕಾಣಿಸುತ್ತೇವೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿರುವ ಸಚಿವ ಅಶ್ವತ್ಥ್ ನಾರಾಯಣ್, ರಾಜ್ಯದಲ್ಲಿನ ಪ್ರತಿಯೊಬ್ಬ ವಿದ್ಯಾವಂತರಿಗೂ ಉದ್ಯೋಗ ಸಿಗುವ ನಿಟ್ಟಿನಲ್ಲಿಯೇ ಸಕಲರಿಗೂ ಉದ್ಯೋಗ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ಬಯಲಾಯ್ತು ಬಿಜೆಪಿ –ಕಾಂಗ್ರೆಸ್ ನಾಟಕ: ಬಂಡೆಪ್ಪ ಕಾಶೆಂಪೂರ್

ಈ ಉದ್ಯೋಗ ಮೇಳದಲ್ಲಿ ಹಲವು ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಿದ್ದರು. 14 ಕಂಪನಿಗಳು ಭಾಗವಹಿಸಿದ್ದವು. ಈ ಸಂದರ್ಭದಲ್ಲಿ ಮಹೀಂದ್ರಾ ಆಂಡ್ ಮಹಿಂದ್ರಾ, ನಂದಿ ಫೌಂಡೇಶನ್ 31 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಭರವಸೆ ನೀಡಿತು. ಅಲ್ಲದೇ, ಒಡಂಬಡಿಕೆಗೆ ಸಹಿ ಹಾಕಿತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...