alex Certify ನಿವೃತ್ತ ಐಬಿ ಅಧಿಕಾರಿ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹತ್ಯೆ ಮಾಡಲೆಂದೇ ನಡೆದಿತ್ತು ಅಪಘಾತ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿವೃತ್ತ ಐಬಿ ಅಧಿಕಾರಿ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹತ್ಯೆ ಮಾಡಲೆಂದೇ ನಡೆದಿತ್ತು ಅಪಘಾತ…!

ಶುಕ್ರವಾರ ಸಂಜೆ ಮೈಸೂರಿನ ಮಾನಸ ಗಂಗೋತ್ರಿ ಆವರಣದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದ ನಿವೃತ್ತ ಐಬಿ ಅಧಿಕಾರಿ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹತ್ಯೆ ಮಾಡುವ ಸಲುವಾಗಿಯೇ ಈ ಅಪಘಾತ ನಡೆಸಲಾಗಿದೆ ಎಂಬ ಅನುಮಾನ ಈಗ ಮೂಡಿದೆ.

ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ವೇಳೆ ಅಪರಿಚಿತ ವಾಹನ ನೋಂದಣಿ ಸಂಖ್ಯೆ ಹೊಂದಿಲ್ಲದೆ ಇರುವುದು ಕಂಡುಬಂದಿದ್ದು, ಹೀಗಾಗಿ ಕೊಲೆ ಉದ್ದೇಶದಿಂದಲೇ ಡಿಕ್ಕಿ ಹೊಡೆಸಿ ಪರಾರಿಯಾಗಿರಬಹುದು ಎಂಬ ಶಂಕೆ ಪೊಲೀಸರಿಂದ ವ್ಯಕ್ತವಾಗಿದೆ.

ಇಂಟಲಿಜೆನ್ಸ್ ಬ್ಯೂರೋ ನಿವೃತ್ತ ಅಧಿಕಾರಿ 87 ವರ್ಷದ ಆರ್.ಎನ್. ಕುಲಕರ್ಣಿ ಶುಕ್ರವಾರ ಸಂಜೆ ವಾಯು ವಿಹಾರ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದರು.

ಆರಂಭದಲ್ಲಿ ಪೊಲೀಸರು ಇದೊಂದು ಅಪಘಾತ ಪ್ರಕರಣ ಎಂದೇ ಭಾವಿಸಿದ್ದರು. ಆದರೆ ಕೂಲಂಕುಶ ಪರಿಶೀಲನೆ ವೇಳೆ ಬೆಚ್ಚಿ ಬೀಳಿಸುವ ಸಂಗತಿ ಬಹಿರಂಗವಾಗಿದೆ. ಈ ಹಿನ್ನಲೆಯಲ್ಲಿ ಆರೋಪಿಗಳ ಪತ್ತೆಗಾಗಿ ಈಗ ಮೂರು ತಂಡಗಳನ್ನು ರಚಿಸಲಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ.

— India.com (@indiacom) November 6, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...