alex Certify ನೀರು ತುಂಬಿದ್ದ ಬಕೆಟ್ ಗೆ ಬಿದ್ದು 10 ತಿಂಗಳ ಮಗು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀರು ತುಂಬಿದ್ದ ಬಕೆಟ್ ಗೆ ಬಿದ್ದು 10 ತಿಂಗಳ ಮಗು ಸಾವು

ನೀರು ತುಂಬಿದ ಬಕೆಟ್ ಗೆ ಬಿದ್ದು 10 ತಿಂಗಳ ಮಗುವೊಂದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ.

ಬಿಸ್ತುವಳ್ಳಿ ಗ್ರಾಮದ ಮಂಜುನಾಥ್ ಹಾಗೂ ತಾರಾ ದಂಪತಿಯ ಪುತ್ರಿ ಹತ್ತು ತಿಂಗಳ ಅನುಶ್ರಾವ್ಯ ಮೃತಪಟ್ಟಿದ್ದು, ಆಟವಾಡುತ್ತಿರುವ ವೇಳೆ ನೀರು ತುಂಬಿದ್ದ ಬಕೆಟ್ ಗೆ ಆಯತಪ್ಪಿ ಬಿದ್ದಿದ್ದಾಳೆ.

ಇದನ್ನು ಗಮನಿಸಿದ ಪೋಷಕರು ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದರೆ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಈಗ ಮುಗಿಲು ಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...