alex Certify ಪಂಚರಾಜ್ಯ ಚುನಾವಣೆಗಳ ಗೆಲುವಿನ ಬೆನ್ನಲ್ಲೇ ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆಗೆ ಬಿಜೆಪಿ ತಯಾರಿ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಚರಾಜ್ಯ ಚುನಾವಣೆಗಳ ಗೆಲುವಿನ ಬೆನ್ನಲ್ಲೇ ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆಗೆ ಬಿಜೆಪಿ ತಯಾರಿ…?

ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಗೆಲುವಿನಿಂದ ಉತ್ಸುಕರಾಗಿರುವ ಬಿಜೆಪಿ ಹೈಕಮಾಂಡ್​ ಕರ್ನಾಟಕದಲ್ಲಿ ಅವಧಿಗೂ ಮುಂಚಿತವಾಗಿ ವಿಧಾನಸಭಾ ಚುನಾವಣೆಯನ್ನು ನಡೆಸುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿಯನ್ನು ಭೇಟಿ ಮಾಡಲು ಸಜ್ಜಾಗಿದೆ ಎನ್ನಲಾಗಿದೆ.

ಪಕ್ಷದ ವರಿಷ್ಠರನ್ನು ಭೇಟಿ ಮಾಡಲು ಸಿಎಂ ಮುಂದಿನ ವಾರ ದೆಹಲಿಗೆ ಬರುವ ಸಾಧ್ಯತೆಯಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ. ದೆಹಲಿಯಲ್ಲಿ ಬಿಜೆಪಿ ನಾಯಕರು ಅವಧಿಪೂರ್ವ ಚುನಾವಣೆಯ ಬಗ್ಗೆ ಬೊಮ್ಮಾಯಿಯವರ ಅಭಿಪ್ರಾಯವನ್ನು ತೆಗೆದುಕೊಳ್ಳಲು ಉತ್ಸುಕರಾಗಿದ್ದಾರೆ ಎಂದು ಹೇಳಿದ್ದಾರೆ.

ಸಿಎಂ ಜೊತೆಗಿನ ಸಭೆಯಲ್ಲಿ, ಪಕ್ಷದ ನಾಯಕರು ಜೆಡಿಎಸ್‌ನೊಂದಿಗೆ ಚುನಾವಣಾ ಪೂರ್ವ ಮೈತ್ರಿ ಬಗ್ಗೆಯೂ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆದ್ದರೆ, ಗುಜರಾತ್ ವಿಧಾನಸಭೆ ಚುನಾವಣೆ ಜತೆಗೆ ಕರ್ನಾಟಕ ಚುನಾವಣೆಯನ್ನೂ ಬೇಗ ನಡೆಸಬೇಕು ಎಂದು ದೆಹಲಿಯಲ್ಲಿರುವ ಬಿಜೆಪಿ ಹೈಕಮಾಂಡ್​ನ ಕೆಲವು ನಾಯಕರು ಡಿಮ್ಯಾಂಡ್​ ಮಾಡಿದ್ದರು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...