alex Certify ಪಂಚರಾಜ್ಯ ಫಲಿತಾಂಶಕ್ಕೆ ರಾಹುಲ್ ಪ್ರತಿಕ್ರಿಯೆ; ಜನರ ತೀರ್ಪನ್ನು ಸ್ವೀಕರಿಸುತ್ತೇನೆ ಎಂದ ಕಾಂಗ್ರೆಸ್ ನಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಚರಾಜ್ಯ ಫಲಿತಾಂಶಕ್ಕೆ ರಾಹುಲ್ ಪ್ರತಿಕ್ರಿಯೆ; ಜನರ ತೀರ್ಪನ್ನು ಸ್ವೀಕರಿಸುತ್ತೇನೆ ಎಂದ ಕಾಂಗ್ರೆಸ್ ನಾಯಕ

ಇಂದು ಪಂಚರಾಜ್ಯ ಚುನಾವಣೆಗಳ ಫಲಿತಾಂಶ ಹೊರಬಿದ್ದಿದೆ. ಈಗಾಗ್ಲೇ ನಾಲ್ಕು ರಾಜ್ಯಗಳಲ್ಲಿ ಬಿಜಪಿ, ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಬಹುಮತದತ್ತ ಸಾಗುತ್ತಿವೆ. ಈ ಐದು ರಾಜ್ಯಗಳಲ್ಲಿ ಒಂದಾದರೂ ತಮ್ಮ ಪಾಲಾಗುತ್ತೆ ಎಂಬ ಭರವಸೆಯಲ್ಲಿದ್ದ ಕೈ ಪಡೆಗೆ ಮತದಾರ ಶಾಕ್ ನೀಡಿದ್ದಾನೆ.

ಪ್ರಸ್ತುತ ಫಲಿತಾಂಶದ ಪ್ರಕಾರ ಕಾಂಗ್ರೆಸ್ ಎಲ್ಲಾ ಐದು ರಾಜ್ಯಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ, ಜನರ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷ ಮತದಾರ ನೀಡಿರುವ ತೀರ್ಪನ್ನು ಒಪ್ಪಿಕೊಳ್ಳುತ್ತದೆ ಎಂದಿದ್ದಾರೆ‌.

ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ಈ ಐದು ರಾಜ್ಯಗಳಲ್ಲಿ ಮತ ಎಣಿಕೆ ನಡೆಯುತ್ತಿದೆ‌. ಪಂಜಾಬ್‌ನಲ್ಲಿ ಎಎಪಿ ಭರ್ಜರಿ ಗೆಲುವು ದಾಖಲಿಸಲು ಸಜ್ಜಾಗಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಆರಾಮಾಗಿ ಪುನರಾಗಮನ ಮಾಡುತ್ತಿದೆ.

ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ. ಜನಾದೇಶದಿಂದ ಗೆದ್ದವರಿಗೆ ಶುಭಾಶಯಗಳು. ಚುನಾವಣೆಯಲ್ಲಿ ಶ್ರಮಿಸಿದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಸ್ವಯಂಸೇವಕರಿಗೆ ನನ್ನ ಕೃತಜ್ಞತೆಗಳು. ಕಾಂಗ್ರೆಸ್ ಪಕ್ಷ ಇದರಿಂದ ಕಲಿಯುತ್ತದೆ. ಮುಂದಿನ ದಿನಗಳಲ್ಲಿಯೂ ಪಕ್ಷ, ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...