alex Certify ಪಂಜುರ್ಲಿ ದೈವದ ವೇಷ ಧರಿಸಿ ರೀಲ್ಸ್‌ ಮಾಡಿದ್ದ ಯುವತಿ; ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆ ಯಾಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಜುರ್ಲಿ ದೈವದ ವೇಷ ಧರಿಸಿ ರೀಲ್ಸ್‌ ಮಾಡಿದ್ದ ಯುವತಿ; ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆ ಯಾಚನೆ

ಮಂಗಳೂರು: ಕಾಂತಾರ ಸಿನಿಮಾದಲ್ಲಿ ವರಾಹ ರೂಪಂ ಹಾಡು ಸಿನಿಮಾದ ಹೈಲೈಟ್. ಹಾಡು ನೋಡಿದ ಎಲ್ಲರಿಗೂ ಒಂದು ಕ್ಷಣ ಮೈ ಜುಮ್ ಎನಿಸದೇ ಇರೋದಿಲ್ಲ. ಇದೀಗ ಪಂಜುರ್ಲಿ ದೈವದ ವೇಷವನ್ನು ಧರಿಸಿ ರೀಲ್ಸ್ ಮಾಡಿದ್ದರು ಮೇಕಪ್ ಆರ್ಟಿಸ್ಟ್ ಶ್ವೇತಾ ರೆಡ್ಡಿ. ಇವರ ಈ ನೃತ್ಯ ಭಾರಿ ವಿವಾದ ಸೃಷ್ಟಿ ಮಾಡಿತ್ತು. ತುಳುನಾಡಿನ ಜನರ ಭಾವನೆಗೆ ಇದು ಧಕ್ಕೆ ತಂದಿದೆ ಅಂತ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಆಕ್ರೋಶದ ಬಳಿಕ ಮೇಕಪ್ ಆರ್ಟಿಸ್ಟ್ ಶ್ವೇತಾ ರೆಡ್ಡಿ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ತಪ್ಪು ಕಾಣಿಕೆ ಹಾಕಿದ್ದಾರೆ. ಕುಟುಂಬ ಸಮೇತ ಧರ್ಮಸ್ಥಳಕ್ಕೆ ಆಗಮಿಸಿದ ಶ್ವೇತಾ ರೆಡ್ಡಿ, ಅರಿಯದೇ ಮಾಡಿರುವ ಕೆಲಸಕ್ಕೆ ಕ್ಷಮೆ ನೀಡು ಅಂತಾ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಅಲ್ಲದೇ ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿಯ ಮುಂದೆ ಕ್ಷಮೆ ಯಾಚಿಸಿದ್ದಾರೆ. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಕ್ಷಮೆ ಕೋರಿದ್ದಾರೆ.

ಜೊತೆಗೆ ಎಲ್ಲರ ಕ್ಷಮೆ ಯಾಚನೆ ಮಾಡಿದ್ದಾರೆ. ಅರಿಯದೇ ತಪ್ಪು ಮಾಡಿದ್ದೇನೆ. ದೈವಾರಾಧನೆ ಬಗ್ಗೆ ನನಗೆ ಅಷ್ಟಾಗಿ ಮಾಹಿತಿ ಇರಲಿಲ್ಲ. ಯಕ್ಷಗಾನದಂತೆ ಇದು ಒಂದು ಎಂದುಕೊಂಡಿದ್ದೆ. ಸಿನಿಮಾ ನೋಡಿ ಹೀಗೆ ಮಾಡಿದ್ದೇನೆ. ದಯವಿಟ್ಟು ಕ್ಷಮಿಸಿ ಎಂದಿದ್ದಾರೆ. ಇವರ ರೀಲ್ಸ್ ನೋಡಿದ್ದ ಅನೇಕರು ಮಂಜುನಾಥನೇ ಇವಳನ್ನು ನೋಡಿಕೊಳ್ಳಲಿ ಎಂದು ಕಮೆಂಟ್ ಮಾಡಿದ್ದರು. ಹೀಗಾಗಿ ಈ ರೀಲ್ಸ್ ಅನ್ನ ಡಿಲೀಟ್ ಮಾಡಿದ್ದಾರೆ. ಹಾಗೂ ಕ್ಷಮೆ ಯಾಚನೆ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...